ಮಂಡ್ಯ

ನ್ಯಾ.ನಾಗಮೋಹನ್‌ ದಾಸ್‌ ವರದಿ ಅವೈಜ್ಞಾನಿಕ : ವೆಂಕಟಗಿರಿಯಯ್ಯ

ಮಂಡ್ಯ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕ ಸದಸ್ಯ ವಿಚಾರಣಾ ಒಳ ಮೀಸಲಾತಿ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಸರ್ಕಾರ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಒಳ ಮೀಸಲಾತಿ ಮಾಡಲು ವೈಜ್ಞಾನಿಕ ಮತ್ತು ನ್ಯಾಯಸಮ್ಮತ ವರದಿ ಪಡೆಯಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಂದಿನ ಚುನಾವಣೆ ಬರುವವರೆಗೂ ಕಾಲದೂಡುವ ಹುನ್ನಾರ ನಡೆಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಎಸ್.ಎಂ.ಕೃಷ್ಣರಿಂದ ನ್ಯಾ.ಹನುಮಂತಪ್ಪ ಆಯೋಗ, ಧರ್ಮಸಿಂಗ್‌ರಿಂದ ಎ.ಜೆ.ಸದಾಶಿವ ಆಯೋಗ ಹೀಗೆ ಸರ್ಕಾರಗಳು ೩೦ ವರ್ಷಗಳಿಂದ ಸಮೀಕ್ಷೆಗೆ ಆಯೋಗಗಳನ್ನು ರಚಿಸಿ, ಅವರ ವರದಿಯನ್ನು ತಿರಸ್ಕರಿಸುವುದಕ್ಕೆ ಸೀಮಿತಗೊಂಡಿವೆ. ಅಂತೆಯೇ ಸಿದ್ದರಾಮಯ್ಯ ಸರ್ಕಾರ ಇದೀಗ ಆಯೋಗದ ಹಲವು ನ್ಯೂನ್ಯತೆಗಳಿಂದ ಕೂಡಿದ ವರದಿ ಪಡೆದಿದ್ದು, ಮೀಸಲಾತಿ ಜಾರಿ ಮಾಡಿದರೂ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದರೆ ಮೀಸಲಾತಿ ತಿರಸ್ಕರಿಸುವಂತೆ ವರಿದಿ ಪಡೆಯಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಮೀಕ್ಷೆಯ ವರದಿ ಮೂಲಕ ಅಸ್ಪೃಶ್ಯ ಜಾತಿಗಳನ್ನು ಒಟ್ಟುಗೂಡಿಸಿ ಮೀಸಲು ವರ್ಗೀಕರಣ ಮಾಡುವ ಬದಲಿಗೆ ಜಾತಿಗಳ ವಿಭಜನೀಕರಣ ಮಾಡಿ, ಅಸ್ಪೃಶ್ಯ ಜಾತಿಗಳನ್ನು ಒಡೆದು ಆಳುವ ಕಿರಾತಕ ಮನಸ್ಥಿತಿಯನ್ನು ತೋರುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ವರದಿಯಿಂದಾಗಿ ಮೀಸಲಾತಿ ವರ್ಗೀಕರಣ, ದಲಿತರ ಏಕೀಕರಣವಾಗುವ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು, ಆದಿಕರ್ನಾಟಕ, ಆದಿ ದ್ರಾವಿಡ ಎಂದು ಪ್ರತ್ಯೇಕವಾಗಿ ನಮೂದಾಗಿರುವ ಹೊಲಯ-ಮಾದಿಗ ಸಂಬಂಧಿತ ಜಾತಿಗಳಿಗೆ ಅನುಗುಣವಾಗಿ ಜಾತಿ ಸಮೀಕ್ಷೆ ಮಾಡಬೇಕು. ಛಲವಾದಿ ಜಾತಿಯು ಹೊಲೆಯ ಸಂಬಂಧಿತ ಜಾತಿಯಾಗಿದ್ದು, ಒಟ್ಟಾಗಿ ಸೇರಿಸಿ ಮೀಸಲಾತಿ ಪ್ರಮಾಣ ನಿಗದಿ ಮಾಡಬೇಕು. ನಾಗಮೋಹನ ದಾಸ್ ವರದಿಯ ನ್ಯೂನ್ಯತೆ ಸರಿಪಡಿಸಿ ಪರಿಶಿಷ್ಟ ಜಾರಿ ಮೀಸಲಾತಿ ವರ್ಗೀಕರಣ ಜಾರಿಗೊಳಿಸಬೇಕು. ೧೯೯೦ರ ಭಾರತ ಸರ್ಕಾರ ತಿದ್ದುಪಡಿಯಂತೆ ಬೌದ್ಧ ಧಮ್ಮಕ್ಕೆ ಮರಳಿದ ಅಸ್ಪೃಶ್ಯರನ್ನು ನವ ಬೌದ್ಧರೆಂದು ಪರಿಗಣಿಸಿ, ಮೀಸಲಾತಿಯಲ್ಲಿ ನವಬೌದ್ಧ ಎಂಬುದನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್, ಮದ್ದೂರು ತಾಲ್ಲೂಕು ಅಧ್ಯಕ್ಷ ಮುತ್ತರಾಜು, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶರಾವತಿ ಅಶ್ವಥ್, ನಿಂಗಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago