mandya
ಮಂಡ್ಯ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕ ಸದಸ್ಯ ವಿಚಾರಣಾ ಒಳ ಮೀಸಲಾತಿ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಸರ್ಕಾರ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.
ಒಳ ಮೀಸಲಾತಿ ಮಾಡಲು ವೈಜ್ಞಾನಿಕ ಮತ್ತು ನ್ಯಾಯಸಮ್ಮತ ವರದಿ ಪಡೆಯಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಂದಿನ ಚುನಾವಣೆ ಬರುವವರೆಗೂ ಕಾಲದೂಡುವ ಹುನ್ನಾರ ನಡೆಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಎಸ್.ಎಂ.ಕೃಷ್ಣರಿಂದ ನ್ಯಾ.ಹನುಮಂತಪ್ಪ ಆಯೋಗ, ಧರ್ಮಸಿಂಗ್ರಿಂದ ಎ.ಜೆ.ಸದಾಶಿವ ಆಯೋಗ ಹೀಗೆ ಸರ್ಕಾರಗಳು ೩೦ ವರ್ಷಗಳಿಂದ ಸಮೀಕ್ಷೆಗೆ ಆಯೋಗಗಳನ್ನು ರಚಿಸಿ, ಅವರ ವರದಿಯನ್ನು ತಿರಸ್ಕರಿಸುವುದಕ್ಕೆ ಸೀಮಿತಗೊಂಡಿವೆ. ಅಂತೆಯೇ ಸಿದ್ದರಾಮಯ್ಯ ಸರ್ಕಾರ ಇದೀಗ ಆಯೋಗದ ಹಲವು ನ್ಯೂನ್ಯತೆಗಳಿಂದ ಕೂಡಿದ ವರದಿ ಪಡೆದಿದ್ದು, ಮೀಸಲಾತಿ ಜಾರಿ ಮಾಡಿದರೂ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದರೆ ಮೀಸಲಾತಿ ತಿರಸ್ಕರಿಸುವಂತೆ ವರಿದಿ ಪಡೆಯಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಮೀಕ್ಷೆಯ ವರದಿ ಮೂಲಕ ಅಸ್ಪೃಶ್ಯ ಜಾತಿಗಳನ್ನು ಒಟ್ಟುಗೂಡಿಸಿ ಮೀಸಲು ವರ್ಗೀಕರಣ ಮಾಡುವ ಬದಲಿಗೆ ಜಾತಿಗಳ ವಿಭಜನೀಕರಣ ಮಾಡಿ, ಅಸ್ಪೃಶ್ಯ ಜಾತಿಗಳನ್ನು ಒಡೆದು ಆಳುವ ಕಿರಾತಕ ಮನಸ್ಥಿತಿಯನ್ನು ತೋರುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ವರದಿಯಿಂದಾಗಿ ಮೀಸಲಾತಿ ವರ್ಗೀಕರಣ, ದಲಿತರ ಏಕೀಕರಣವಾಗುವ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು, ಆದಿಕರ್ನಾಟಕ, ಆದಿ ದ್ರಾವಿಡ ಎಂದು ಪ್ರತ್ಯೇಕವಾಗಿ ನಮೂದಾಗಿರುವ ಹೊಲಯ-ಮಾದಿಗ ಸಂಬಂಧಿತ ಜಾತಿಗಳಿಗೆ ಅನುಗುಣವಾಗಿ ಜಾತಿ ಸಮೀಕ್ಷೆ ಮಾಡಬೇಕು. ಛಲವಾದಿ ಜಾತಿಯು ಹೊಲೆಯ ಸಂಬಂಧಿತ ಜಾತಿಯಾಗಿದ್ದು, ಒಟ್ಟಾಗಿ ಸೇರಿಸಿ ಮೀಸಲಾತಿ ಪ್ರಮಾಣ ನಿಗದಿ ಮಾಡಬೇಕು. ನಾಗಮೋಹನ ದಾಸ್ ವರದಿಯ ನ್ಯೂನ್ಯತೆ ಸರಿಪಡಿಸಿ ಪರಿಶಿಷ್ಟ ಜಾರಿ ಮೀಸಲಾತಿ ವರ್ಗೀಕರಣ ಜಾರಿಗೊಳಿಸಬೇಕು. ೧೯೯೦ರ ಭಾರತ ಸರ್ಕಾರ ತಿದ್ದುಪಡಿಯಂತೆ ಬೌದ್ಧ ಧಮ್ಮಕ್ಕೆ ಮರಳಿದ ಅಸ್ಪೃಶ್ಯರನ್ನು ನವ ಬೌದ್ಧರೆಂದು ಪರಿಗಣಿಸಿ, ಮೀಸಲಾತಿಯಲ್ಲಿ ನವಬೌದ್ಧ ಎಂಬುದನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್, ಮದ್ದೂರು ತಾಲ್ಲೂಕು ಅಧ್ಯಕ್ಷ ಮುತ್ತರಾಜು, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶರಾವತಿ ಅಶ್ವಥ್, ನಿಂಗಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…