ಮಂಡ್ಯ

ಕೆ.ಆರ್‌.ಪೇಟೆ| ಒಂದೇ ದಿನ ಗಂಡ ಹೆಂಡತಿ ಇಬ್ಬರೂ ಸಾವು

ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ ಪೂಜೆ ಸಲ್ಲಿಸುವ ವೇಳೆ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:-ಮೈಸೂರು| ಬಾರ್‌ ಬಿಲ್‌ ಕಟ್ಟುವ ವಿಚಾರಕ್ಕೆ ಗಲಾಟೆ: ಯುವಕನಿಗೆ ಚಾಕು ಇರಿತ

ಕಳೆದ ೪೬ ವರ್ಷಗಳ ಹಿಂದೆ ಗೌರಮ್ಮ ಮತ್ತು ಲಿಂಗರಾಜನಾಯಕ ಅವರು ವಿವಾಹವಾಗಿದ್ದರು. ಕಳೆದ ೪೬ ವರ್ಷಗಳಿಂದಲೂ ಜೊತೆಯಲ್ಲಿ ಜೀವನ ನಡೆಸಿದ್ದ ದಂಪತಿಗಳಿಬ್ಬರೂ ಎಲ್ಲಿಗೆ ಹೋದರೂ ಜೊತೆಯಲ್ಲಿಯೇ ಹೋಗಿ ಬರುತ್ತಿದ್ದರು. ಈ ದಂಪತಿಗೆ ಜಗದೀಶ್ ಮತ್ತು ವಿಜಯ್ ಕುಮಾರ್ ಎಂಬ ಇಬ್ಬರು ಪುತ್ರರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago