ಮಂಡ್ಯ

ಕೆ.ಆರ್.ಪೇಟೆ | ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆ ಸಾವು

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ.

ಸಾರಂಗಿ ಗ್ರಾಮದ ಜಯರಾಮೇಗೌಡರ ಪತ್ನಿ ಶಾಂತಮ್ಮ(55), ಲಕ್ಷ್ಮಣ್ ಅವರ ಪತ್ನಿ ಸರೋಜಮ್ಮ(60) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆ ವಿವರ: ಸಾರಂಗಿ ಗ್ರಾಮ ಯೋಗೇಶ್ ಕುಟುಂಬದವರು ಹಮ್ಮಿಕೊಂಡಿದ್ದ ಬೀಗರ ಔತಣ ಕೂಟವನ್ನು ಶ್ರೀ ಗವಿರಂಗನಾಥಸ್ವಾಮಿ ದೇವಾಲಯದ ಶ್ರೀ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದರು. ಪಂಕ್ತಿಯಲ್ಲಿ ಬೇಗ ಊಟ ಮುಗಿಸಿದ ಸಾರಂಗಿ ಗ್ರಾಮದ ಶಾಂತಮ್ಮ, ಸರೋಜಮ್ಮ, ನಾಗಮ್ಮ, ತಿಮ್ಮೇಗೌಡ, ಯೋಗೇಶ್ ಮತ್ತಿತರರು ತಮ್ಮನ್ನು ಕರೆತಂದಿದ್ದ ಲಾರಿಯ ಬಳಿ ಹೋಗುತ್ತಿರುವಾಗ ಲಾರಿಯನ್ನು ಸಮತಟ್ಟು ಪ್ರದೇಶದಲ್ಲಿ ನಿಲ್ಲಿಸದೇ ಇಳಿಜಾರಿನಲ್ಲಿ ನಿಲ್ಲಿಸಿದ್ದ ಚಾಲಕನ ಅಜಾರೂಕತೆಯಿಂದ ಲಾರಿಯು ಹಿಮ್ಮುಖವಾಗಿ ಚಲಿಸಿದೆ. ಲಾರಿ ಕಡೆಗೆ ಹೊರಟಿದ್ದ ಶಾಂತಮ್ಮ ಮತ್ತು ಸರೋಜಮ್ಮ ಅವರ ಮೇಲೆ ಲಾರಿಯ ಚಕ್ರಗಳು ಹರಿದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ನಾಗಮ್ಮ ಎಂಬುವವರಿಗೂ ಗಂಭೀರವಾದ ಗಾಯಗಳಾಗಿದ್ದು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಸಂತಾಪ: ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕರಾದ ಹೆಚ್.ಟಿ.ಮಂಜು ಅವರು ಈ ಘಟನೆ ನಡೆಯಬಾರದಿತ್ತು. ಆಕಸ್ಮಿಕವಾಗಿ ನಡೆದಿರುವ ಘಟನೆಯಲ್ಲಿ ಮೃತರಾದ ಶಾಂತಮ್ಮ ಮತ್ತು ಸರೋಜಮ್ಮ ಅವರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದಯಾಮಯನಾದ ದೇವರು ನೀಡಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ.

ವಕೀಲರ ನಡುವೆ ಗಲಾಟೆ: ಈ ಅಪಘಾತದಲ್ಲಿ ಮೃತಪಟ್ಟಿರುವ ಶಾಂತಮ್ಮ ಮತ್ತು ಸರೋಜಮ್ಮ ಅವರಿಗೆ ಪರಿಹಾರ ಕೊಡಿಸುವ ಸಂಬಂಧದ ಕೇಸು ಪಡೆಯುವ ಸಂಬಂಧ ವಕೀಲರ ನಡುವೆ ಪರಸ್ಪರ ಮಾರಾಮಾರಿ ನಡೆದಿದ್ದು, ವಕೀಲರಾದ ಕೆ.ಬೋರೇಗೌಡ, ಎಂ.ಆರ್.ನಾಗೇಗೌಡ, ಮಂಜೇಗೌಡ ಮತ್ತಿತರರು ಪರಸ್ಪರ ಕೈ ಕೈ ಮಿಲಾಯಿಸಿದ್ದು ಹಲವು ವಕೀಲರಿಗೆ ಗಾಯಗಳಾಗಿದ್ದು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

9 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

11 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

11 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

11 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

11 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

11 hours ago