ಮಂಡ್ಯ

ಕೆ.ಆರ್.ಪೇಟೆ | ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆ ಸಾವು

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ.

ಸಾರಂಗಿ ಗ್ರಾಮದ ಜಯರಾಮೇಗೌಡರ ಪತ್ನಿ ಶಾಂತಮ್ಮ(55), ಲಕ್ಷ್ಮಣ್ ಅವರ ಪತ್ನಿ ಸರೋಜಮ್ಮ(60) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆ ವಿವರ: ಸಾರಂಗಿ ಗ್ರಾಮ ಯೋಗೇಶ್ ಕುಟುಂಬದವರು ಹಮ್ಮಿಕೊಂಡಿದ್ದ ಬೀಗರ ಔತಣ ಕೂಟವನ್ನು ಶ್ರೀ ಗವಿರಂಗನಾಥಸ್ವಾಮಿ ದೇವಾಲಯದ ಶ್ರೀ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದರು. ಪಂಕ್ತಿಯಲ್ಲಿ ಬೇಗ ಊಟ ಮುಗಿಸಿದ ಸಾರಂಗಿ ಗ್ರಾಮದ ಶಾಂತಮ್ಮ, ಸರೋಜಮ್ಮ, ನಾಗಮ್ಮ, ತಿಮ್ಮೇಗೌಡ, ಯೋಗೇಶ್ ಮತ್ತಿತರರು ತಮ್ಮನ್ನು ಕರೆತಂದಿದ್ದ ಲಾರಿಯ ಬಳಿ ಹೋಗುತ್ತಿರುವಾಗ ಲಾರಿಯನ್ನು ಸಮತಟ್ಟು ಪ್ರದೇಶದಲ್ಲಿ ನಿಲ್ಲಿಸದೇ ಇಳಿಜಾರಿನಲ್ಲಿ ನಿಲ್ಲಿಸಿದ್ದ ಚಾಲಕನ ಅಜಾರೂಕತೆಯಿಂದ ಲಾರಿಯು ಹಿಮ್ಮುಖವಾಗಿ ಚಲಿಸಿದೆ. ಲಾರಿ ಕಡೆಗೆ ಹೊರಟಿದ್ದ ಶಾಂತಮ್ಮ ಮತ್ತು ಸರೋಜಮ್ಮ ಅವರ ಮೇಲೆ ಲಾರಿಯ ಚಕ್ರಗಳು ಹರಿದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ನಾಗಮ್ಮ ಎಂಬುವವರಿಗೂ ಗಂಭೀರವಾದ ಗಾಯಗಳಾಗಿದ್ದು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಸಂತಾಪ: ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕರಾದ ಹೆಚ್.ಟಿ.ಮಂಜು ಅವರು ಈ ಘಟನೆ ನಡೆಯಬಾರದಿತ್ತು. ಆಕಸ್ಮಿಕವಾಗಿ ನಡೆದಿರುವ ಘಟನೆಯಲ್ಲಿ ಮೃತರಾದ ಶಾಂತಮ್ಮ ಮತ್ತು ಸರೋಜಮ್ಮ ಅವರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದಯಾಮಯನಾದ ದೇವರು ನೀಡಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ.

ವಕೀಲರ ನಡುವೆ ಗಲಾಟೆ: ಈ ಅಪಘಾತದಲ್ಲಿ ಮೃತಪಟ್ಟಿರುವ ಶಾಂತಮ್ಮ ಮತ್ತು ಸರೋಜಮ್ಮ ಅವರಿಗೆ ಪರಿಹಾರ ಕೊಡಿಸುವ ಸಂಬಂಧದ ಕೇಸು ಪಡೆಯುವ ಸಂಬಂಧ ವಕೀಲರ ನಡುವೆ ಪರಸ್ಪರ ಮಾರಾಮಾರಿ ನಡೆದಿದ್ದು, ವಕೀಲರಾದ ಕೆ.ಬೋರೇಗೌಡ, ಎಂ.ಆರ್.ನಾಗೇಗೌಡ, ಮಂಜೇಗೌಡ ಮತ್ತಿತರರು ಪರಸ್ಪರ ಕೈ ಕೈ ಮಿಲಾಯಿಸಿದ್ದು ಹಲವು ವಕೀಲರಿಗೆ ಗಾಯಗಳಾಗಿದ್ದು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago