ಮಂಡ್ಯ

ಕೆ.ಆರ್.ಪೇಟೆ | ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆ ಸಾವು

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ.

ಸಾರಂಗಿ ಗ್ರಾಮದ ಜಯರಾಮೇಗೌಡರ ಪತ್ನಿ ಶಾಂತಮ್ಮ(55), ಲಕ್ಷ್ಮಣ್ ಅವರ ಪತ್ನಿ ಸರೋಜಮ್ಮ(60) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆ ವಿವರ: ಸಾರಂಗಿ ಗ್ರಾಮ ಯೋಗೇಶ್ ಕುಟುಂಬದವರು ಹಮ್ಮಿಕೊಂಡಿದ್ದ ಬೀಗರ ಔತಣ ಕೂಟವನ್ನು ಶ್ರೀ ಗವಿರಂಗನಾಥಸ್ವಾಮಿ ದೇವಾಲಯದ ಶ್ರೀ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದರು. ಪಂಕ್ತಿಯಲ್ಲಿ ಬೇಗ ಊಟ ಮುಗಿಸಿದ ಸಾರಂಗಿ ಗ್ರಾಮದ ಶಾಂತಮ್ಮ, ಸರೋಜಮ್ಮ, ನಾಗಮ್ಮ, ತಿಮ್ಮೇಗೌಡ, ಯೋಗೇಶ್ ಮತ್ತಿತರರು ತಮ್ಮನ್ನು ಕರೆತಂದಿದ್ದ ಲಾರಿಯ ಬಳಿ ಹೋಗುತ್ತಿರುವಾಗ ಲಾರಿಯನ್ನು ಸಮತಟ್ಟು ಪ್ರದೇಶದಲ್ಲಿ ನಿಲ್ಲಿಸದೇ ಇಳಿಜಾರಿನಲ್ಲಿ ನಿಲ್ಲಿಸಿದ್ದ ಚಾಲಕನ ಅಜಾರೂಕತೆಯಿಂದ ಲಾರಿಯು ಹಿಮ್ಮುಖವಾಗಿ ಚಲಿಸಿದೆ. ಲಾರಿ ಕಡೆಗೆ ಹೊರಟಿದ್ದ ಶಾಂತಮ್ಮ ಮತ್ತು ಸರೋಜಮ್ಮ ಅವರ ಮೇಲೆ ಲಾರಿಯ ಚಕ್ರಗಳು ಹರಿದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ನಾಗಮ್ಮ ಎಂಬುವವರಿಗೂ ಗಂಭೀರವಾದ ಗಾಯಗಳಾಗಿದ್ದು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಸಂತಾಪ: ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕರಾದ ಹೆಚ್.ಟಿ.ಮಂಜು ಅವರು ಈ ಘಟನೆ ನಡೆಯಬಾರದಿತ್ತು. ಆಕಸ್ಮಿಕವಾಗಿ ನಡೆದಿರುವ ಘಟನೆಯಲ್ಲಿ ಮೃತರಾದ ಶಾಂತಮ್ಮ ಮತ್ತು ಸರೋಜಮ್ಮ ಅವರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದಯಾಮಯನಾದ ದೇವರು ನೀಡಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ.

ವಕೀಲರ ನಡುವೆ ಗಲಾಟೆ: ಈ ಅಪಘಾತದಲ್ಲಿ ಮೃತಪಟ್ಟಿರುವ ಶಾಂತಮ್ಮ ಮತ್ತು ಸರೋಜಮ್ಮ ಅವರಿಗೆ ಪರಿಹಾರ ಕೊಡಿಸುವ ಸಂಬಂಧದ ಕೇಸು ಪಡೆಯುವ ಸಂಬಂಧ ವಕೀಲರ ನಡುವೆ ಪರಸ್ಪರ ಮಾರಾಮಾರಿ ನಡೆದಿದ್ದು, ವಕೀಲರಾದ ಕೆ.ಬೋರೇಗೌಡ, ಎಂ.ಆರ್.ನಾಗೇಗೌಡ, ಮಂಜೇಗೌಡ ಮತ್ತಿತರರು ಪರಸ್ಪರ ಕೈ ಕೈ ಮಿಲಾಯಿಸಿದ್ದು ಹಲವು ವಕೀಲರಿಗೆ ಗಾಯಗಳಾಗಿದ್ದು ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

41 mins ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

3 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago