ಮಂಡ್ಯ

ಕೈಕೊಟ್ಟ ವರುಣ : ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ ನಿಗಮ ವಿಶೇಷ ಪೂಜೆಯ ಮೊರೆ ಹೋಗಿದೆ. ಮಂಗಳವಾರ ಬೆಳಗ್ಗೆ ಪ್ರಸಿದ್ಧ ವೈದಿಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ ಭರ್ತಿಗೆ 12 ಮಂದಿ ವೈದಿಕ ತಂಡದಿಂದ ವಿಶೇಷ ಪೂಜೆ ನಡೆಯಲಿದೆ.

ವರುಣನಿಗಾಗಿ ಹೋಮ-ಹವನ, ಗಂಗಾಪೂಜೆ ಸೇರಿದಂತೆ ಹಲವು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಎರಡು ವರ್ಷಗಳ ಹಿಂದೆಯೂ ಮಳೆ ಕೈಕೊಟ್ಟಿದ್ದ ಕಾರಣ ಭಾನುಪ್ರಕಾಶ ಶರ್ಮಾ ಅವರ ನೇತೃತ್ವದಲ್ಲಿ ಅಂದು ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ವಿಶೇಷ ಪೂಜೆ ಸಲ್ಲಿಸಿದ್ದರು. ಆ ನಂತರ ಉತ್ತಮ ಮಳೆಯಾಗಿ ಕಾವೇರಿ ಒಡಲು ಭರ್ತಿಯಾಗಿತ್ತು. ಅಕ್ಟೋಬರ್ ನಲ್ಲಿ ಜಲಾಶಯ ಭರ್ತಿಯಾಗಿ ನವೆಂಬರ್‌ನಲ್ಲಿ ಭಾಗಿನ ಅರ್ಪಿಸಲಾಗಿತ್ತು.

ಈ ಬಾರಿ ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, 5 ವರ್ಷದ ಬಳಿಕ ಅತಿ ಕಡಿಮೆ ನೀರಿನ ಮಟ್ಟವನ್ನು ಕೆಆರ್‌ಎಸ್ ಜಲಾಶಯ ತಲುಪಿದೆ. ಇದರಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರಿಗೆ ಅಭಾವ ಶುರುವಾಗುವ ಸಾಧ್ಯತೆಯಿದೆ.

ಅಲ್ಲದೇ ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲೂ ಆತಂಕ ಎದುರರಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ 83 ಅಡಿ ನೀರು ಮಾತ್ರ ಸಂಗ್ರಹವಾಗಿದ್ದು, 12.152 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ.

ಕಳೆದ ವಾರ 79 ಅಡಿಗೆ ನೀರಿನ ಮಟ್ಟ ಕುಸಿದಿತ್ತು, ಹೇಮಾವತಿ ಜಲಾಶಯದಿಂದ ನೀರು ಬಿಟ್ಟಿದ್ದ ಹಿನ್ನೆಲೆಯಲ್ಲಿ 83 ಅಡಿಗೆ ನೀರಿನ ಮಟ್ಟ ಏರಿಕೆಯಾಯಿತು. ಹೀಗಾಗಿ ಮಂಗಳವಾರ ಕಾವೇರಿ ಮಾತೆಯ ಎದುರು ವರುಣನಿಗಾಗಿ ವಿಶೇಷ ಹೋಮ ಹಾಗೂ ಪೂಜೆಯನ್ನು ನೆರವೇರಿಸಲಾಗುತ್ತದೆ.

lokesh

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

3 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

4 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago