ಮಂಡ್ಯ

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ.

ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ನಿಮಿಷಾಂಭ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿದರು.

87ದಿನ ರಾಜ್ಯಾದ್ಯಂತ ಕನ್ನಡ ರಥ ಸಂಚಾರ

87 ದಿ‌ನ ರಾಜ್ಯಾದ್ಯಂತ ಸಂಚಾರ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ  ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ರಥವು 87 ದಿ‌ನ ರಾಜ್ಯಾದ್ಯಂತ ಸಂಚಾರಿಸಿ ಸಕ್ಕರೆಯ ನಾಡಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.

ಬರುವ ಎಲ್ಲರಿಗೂ ಕನ್ನಡ ನುಡಿಯ ಸವಿ ಬಡಿಸಲು ಸಿದ್ಧವಾಗಿದೆ ಎಂಬುವ ರೀತಿ ಅಲಂಕೃತ ವಾಗಿರುವ ಕನ್ನಡ ರಥ ಕನ್ನಡಿಗರ ಕಣ್ಮನ ಸೆಳೆಯಲಿದೆ.

ವಿಶೇಷತೆ ಸಾರುವ ರಥ

ಮಂಡ್ಯ ಜಿಲ್ಲೆಯ ವಿಶೇಷತೆ ಸಾರುವ ರಥ ಕನ್ನಡ ನುಡಿ ಕಲಿಸುವ ತಾಯಿ ಭುವನೇಶ್ವರಿ, ಜಿಲ್ಲೆಗೆ ಅನ್ನ ನೀಡುವ ಕಾವೇರಿ ಮಾತೆ, ಉಳುಮೆ ಮಾಡಲು ಸಿದ್ಧವಿರುವ ಎತ್ತುಗಳು ಮತ್ತು ರೈತ, ಮಂಡ್ಯ ಜಿಲ್ಲೆ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಸುಂದರ ಆಕೃತಿಗಳು ಜಿಲ್ಲೆಯ ಬಗ್ಗೆ ಹಮ್ಮೆ ಉಂಟು ಮಾಡುತ್ತದೆ.

ಜ್ಙಾನ ಪೀಠ ಪುರಸ್ಕೃತರಾದ ಕುವೆಂಪು, ದಾ.ರಾ ಬೇಂದ್ರೆ, ಶಿವರಾಮ್ ಕಾರಂತ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ ಗೋಕಾಕ್, ಯು.ಆರ್ ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ್ ಅವರ ಭಾವಚಿತ್ರಗಳು ಹಾಗೂ ಮಂಡ್ಯ ಜಿಲ್ಲೆಯ 7 ತಾಲ್ಲೂಕಿನಲ್ಲಿ ಪ್ರೇಕ್ಷಣೀಯ ಸ್ಥಳಗಳು ಎಲ್ಲರನ್ನೂ ಸಾಹಿತ್ಯ ಸಮ್ಮೇಳನಕ್ಕೆ ಬನ್ನಿ ಕನ್ನಡದ ಹಬ್ಬ ಆಚರಿಸೋಣ ಎನ್ನುತ್ತಿದೆ.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ ಹೆಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಡಾ:ಮೀರಾ ಶಿವಲಿಂಗಯ್ಯ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ಪೊನ್ನದೊಡ್ಡಿ, ಹರ್ಷ ವಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago