ಮಂಡ್ಯ

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ.

ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ನಿಮಿಷಾಂಭ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿದರು.

87ದಿನ ರಾಜ್ಯಾದ್ಯಂತ ಕನ್ನಡ ರಥ ಸಂಚಾರ

87 ದಿ‌ನ ರಾಜ್ಯಾದ್ಯಂತ ಸಂಚಾರ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ  ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ರಥವು 87 ದಿ‌ನ ರಾಜ್ಯಾದ್ಯಂತ ಸಂಚಾರಿಸಿ ಸಕ್ಕರೆಯ ನಾಡಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.

ಬರುವ ಎಲ್ಲರಿಗೂ ಕನ್ನಡ ನುಡಿಯ ಸವಿ ಬಡಿಸಲು ಸಿದ್ಧವಾಗಿದೆ ಎಂಬುವ ರೀತಿ ಅಲಂಕೃತ ವಾಗಿರುವ ಕನ್ನಡ ರಥ ಕನ್ನಡಿಗರ ಕಣ್ಮನ ಸೆಳೆಯಲಿದೆ.

ವಿಶೇಷತೆ ಸಾರುವ ರಥ

ಮಂಡ್ಯ ಜಿಲ್ಲೆಯ ವಿಶೇಷತೆ ಸಾರುವ ರಥ ಕನ್ನಡ ನುಡಿ ಕಲಿಸುವ ತಾಯಿ ಭುವನೇಶ್ವರಿ, ಜಿಲ್ಲೆಗೆ ಅನ್ನ ನೀಡುವ ಕಾವೇರಿ ಮಾತೆ, ಉಳುಮೆ ಮಾಡಲು ಸಿದ್ಧವಿರುವ ಎತ್ತುಗಳು ಮತ್ತು ರೈತ, ಮಂಡ್ಯ ಜಿಲ್ಲೆ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಸುಂದರ ಆಕೃತಿಗಳು ಜಿಲ್ಲೆಯ ಬಗ್ಗೆ ಹಮ್ಮೆ ಉಂಟು ಮಾಡುತ್ತದೆ.

ಜ್ಙಾನ ಪೀಠ ಪುರಸ್ಕೃತರಾದ ಕುವೆಂಪು, ದಾ.ರಾ ಬೇಂದ್ರೆ, ಶಿವರಾಮ್ ಕಾರಂತ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ ಗೋಕಾಕ್, ಯು.ಆರ್ ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ್ ಅವರ ಭಾವಚಿತ್ರಗಳು ಹಾಗೂ ಮಂಡ್ಯ ಜಿಲ್ಲೆಯ 7 ತಾಲ್ಲೂಕಿನಲ್ಲಿ ಪ್ರೇಕ್ಷಣೀಯ ಸ್ಥಳಗಳು ಎಲ್ಲರನ್ನೂ ಸಾಹಿತ್ಯ ಸಮ್ಮೇಳನಕ್ಕೆ ಬನ್ನಿ ಕನ್ನಡದ ಹಬ್ಬ ಆಚರಿಸೋಣ ಎನ್ನುತ್ತಿದೆ.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ ಹೆಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಡಾ:ಮೀರಾ ಶಿವಲಿಂಗಯ್ಯ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ಪೊನ್ನದೊಡ್ಡಿ, ಹರ್ಷ ವಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

2 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

3 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

3 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

8 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

8 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

9 hours ago