ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ʼಕನ್ನಡಕ್ಕಾಗಿ ಓಡುʼ ಘೋಷಣೆಯೊಂದಿಗೆ ಮ್ಯಾರಥಾನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್‌ ಅಥ್ಲೀಟ್‌ಗಳ ಜೊತೆ ಇನ್ನಿತರರು ಪಾಲ್ಗೊಂಡಿದ್ದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಈ ಮ್ಯಾರಥಾನ್‌ ನಡೆಯಿತು.

ಶಾಸಕ ಪಿ. ರವಿಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್‌ ಓಟದಲ್ಲಿ ಯುವಕರು, ಯುವತಿಯರು, ವಿದ್ಯಾರ್ಥಿಗಳು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಚಿತ್ರನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್‌, ಸಪ್ತಮಿ ಗೌಡ, ಅವರು ಕೂಡ ಸ್ವಲ್ಪ ದೂರ ಓಡುವ ಮೂಲಕ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಗೌರಿ ಗದ್ದೆ ಆಶ್ರಮದ ವಿನಯ್‌ ಗುರೂಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಮಧು ಜಿ ಮಾದೇಗೌಡ, ದಿನೇಶ್‌ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್‌ ತನ್ವೀರ್‌ ಆಸಿಫ್‌, ಎಡಿಜಿಪಿ ಅಲೋಕ್‌ ಕುಮಾರ್‌, ಐಜಿಪಿ ರವಿಕಾಂತೇಗೌಡ‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

 

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

10 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

10 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

11 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

11 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

12 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

13 hours ago