ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ʼಕನ್ನಡಕ್ಕಾಗಿ ಓಡುʼ ಘೋಷಣೆಯೊಂದಿಗೆ ಮ್ಯಾರಥಾನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್‌ ಅಥ್ಲೀಟ್‌ಗಳ ಜೊತೆ ಇನ್ನಿತರರು ಪಾಲ್ಗೊಂಡಿದ್ದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಈ ಮ್ಯಾರಥಾನ್‌ ನಡೆಯಿತು.

ಶಾಸಕ ಪಿ. ರವಿಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್‌ ಓಟದಲ್ಲಿ ಯುವಕರು, ಯುವತಿಯರು, ವಿದ್ಯಾರ್ಥಿಗಳು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಚಿತ್ರನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್‌, ಸಪ್ತಮಿ ಗೌಡ, ಅವರು ಕೂಡ ಸ್ವಲ್ಪ ದೂರ ಓಡುವ ಮೂಲಕ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಗೌರಿ ಗದ್ದೆ ಆಶ್ರಮದ ವಿನಯ್‌ ಗುರೂಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಮಧು ಜಿ ಮಾದೇಗೌಡ, ದಿನೇಶ್‌ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್‌ ತನ್ವೀರ್‌ ಆಸಿಫ್‌, ಎಡಿಜಿಪಿ ಅಲೋಕ್‌ ಕುಮಾರ್‌, ಐಜಿಪಿ ರವಿಕಾಂತೇಗೌಡ‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

 

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago