ಮಂಡ್ಯ

ನುಡಿ ಜಾತ್ರೆಗೆ ಸಕ್ಕರೆ ನಗರ ಸಜ್ಜು : ಸಚಿವ ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು(ಡಿ.17) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಜನತೆಯನ್ನು ನೋಡಿದ್ರೆ ಖುಷಿ ಆಗುತ್ತಿದೆ. ಇಡೀ ರಾಜ್ಯದ ಜನ ಮಂಡ್ಯದ ಕಡೆ ತಿರುಗಿ ನೋಡುವಂತೆ ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ, ಸಮ್ಮೇಳನವನ್ನು ಯಶಸ್ವಿಗೊಳಿಸಲು ಕೈಜೋಡಿಸಿ ಎಂದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ  ಸ್ವಾಮೀಜಿ  ಮಾತನಾಡಿ, ಜಿಲ್ಲೆಯಲ್ಲಿ ನಡೆಯತ್ತಿರುವ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಯು ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷವಾದ ಕಾರ್ಯಕ್ರಮವಾಗಿದ್ದು, ಈ ಮೂಲಕ ಎಲ್ಲಾ ಕನ್ನಡಿಗರು ಒಂದಾಗಬೇಕು.ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತೆ ಎಂದು ಕನ್ನಡಕ್ಕಾಗಿ ನಡೆಯುತ್ತಿರುವ ಈ ಓಟ ಯಶಸ್ವಿಯಾಗಲಿ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ  ಮಾತನಾಡಿ, ಡಿಸೆಂಬರ್ 20, 21, 22 ರಂದು 3 ದಿನಗಳ ಕಾಲ ಕನ್ನಡ ಸಮ್ಮೇಳನವನ್ನು ಆಚರಿಸುತ್ತಿದ್ದೂ, ಇವತ್ತಿನ ಕನ್ನಡದ ಓಟ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿ ಓಟವಾಗಿದೆ. ಎಲ್ಲರೂ ಮಂಡ್ಯದ ಕನ್ನಡ ಹಿರಿಮೆಯನ್ನು ಹಾಗೂ ಕನ್ನಡದ ಅಭಿಮಾನವನ್ನು ತೋರ್ಪಡಿಸಬೇಕು ಎಂದರು.

ಗೌರಿಗದ್ದೆಯ ವಿನಯ್ ಗುರೂಜಿ  ಮಾತನಾಡಿ, ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಮಂಡ್ಯ ಜಿಲ್ಲೆಯು ಕನ್ನಡದ ಉಳಿವಿಗೆ ಸಾಕ್ಷಿಯಾಗಲಿ. ಕನ್ನಡ ನೆಲ, ಜಲ, ಭಾಷೆಯನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಕಲೆಯೊಂದಿಗೆ ಕನ್ನಡವನ್ನು ಬೆಳೆಸಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ, ವೇದಿಕೆ ಮೇಲಿರುವ ಗಣ್ಯರುಗಳನ್ನು ಸ್ವಾಗತಿಸಿದರು. ಚಲನಚಿತ್ರ ನಟ ಡಾಲಿ ಧನಂಜಯ್, ನೀನಾಸಂ ಸತೀಶ್, ನಟಿ ಸಪ್ತಮಿಗೌಡ ಅವರುಗಳು ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಬಿಜಿಎಸ್ ಮಠದ ಪುರುಷೋತ್ತಮ ಗುರೂಜಿ, ಶಾಸಕರುಗಳಾದ ಪಿ.ರವಿಕುಮಾರ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೆಗೌಡ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ ಶಿವಾನಂದಮೂರ್ತಿ, ನಗರಸಭೆ ಅಧ್ಯಕ್ಷ ಎಂ ಬಿ ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ವೆಂಕಟರಮಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

6 hours ago