ಮಂಡ್ಯ

ನುಡಿ ಜಾತ್ರೆಗೆ ಸಕ್ಕರೆ ನಗರ ಸಜ್ಜು : ಸಚಿವ ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು(ಡಿ.17) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಜನತೆಯನ್ನು ನೋಡಿದ್ರೆ ಖುಷಿ ಆಗುತ್ತಿದೆ. ಇಡೀ ರಾಜ್ಯದ ಜನ ಮಂಡ್ಯದ ಕಡೆ ತಿರುಗಿ ನೋಡುವಂತೆ ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ, ಸಮ್ಮೇಳನವನ್ನು ಯಶಸ್ವಿಗೊಳಿಸಲು ಕೈಜೋಡಿಸಿ ಎಂದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ  ಸ್ವಾಮೀಜಿ  ಮಾತನಾಡಿ, ಜಿಲ್ಲೆಯಲ್ಲಿ ನಡೆಯತ್ತಿರುವ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಯು ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷವಾದ ಕಾರ್ಯಕ್ರಮವಾಗಿದ್ದು, ಈ ಮೂಲಕ ಎಲ್ಲಾ ಕನ್ನಡಿಗರು ಒಂದಾಗಬೇಕು.ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತೆ ಎಂದು ಕನ್ನಡಕ್ಕಾಗಿ ನಡೆಯುತ್ತಿರುವ ಈ ಓಟ ಯಶಸ್ವಿಯಾಗಲಿ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ  ಮಾತನಾಡಿ, ಡಿಸೆಂಬರ್ 20, 21, 22 ರಂದು 3 ದಿನಗಳ ಕಾಲ ಕನ್ನಡ ಸಮ್ಮೇಳನವನ್ನು ಆಚರಿಸುತ್ತಿದ್ದೂ, ಇವತ್ತಿನ ಕನ್ನಡದ ಓಟ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿ ಓಟವಾಗಿದೆ. ಎಲ್ಲರೂ ಮಂಡ್ಯದ ಕನ್ನಡ ಹಿರಿಮೆಯನ್ನು ಹಾಗೂ ಕನ್ನಡದ ಅಭಿಮಾನವನ್ನು ತೋರ್ಪಡಿಸಬೇಕು ಎಂದರು.

ಗೌರಿಗದ್ದೆಯ ವಿನಯ್ ಗುರೂಜಿ  ಮಾತನಾಡಿ, ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಮಂಡ್ಯ ಜಿಲ್ಲೆಯು ಕನ್ನಡದ ಉಳಿವಿಗೆ ಸಾಕ್ಷಿಯಾಗಲಿ. ಕನ್ನಡ ನೆಲ, ಜಲ, ಭಾಷೆಯನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಕಲೆಯೊಂದಿಗೆ ಕನ್ನಡವನ್ನು ಬೆಳೆಸಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ, ವೇದಿಕೆ ಮೇಲಿರುವ ಗಣ್ಯರುಗಳನ್ನು ಸ್ವಾಗತಿಸಿದರು. ಚಲನಚಿತ್ರ ನಟ ಡಾಲಿ ಧನಂಜಯ್, ನೀನಾಸಂ ಸತೀಶ್, ನಟಿ ಸಪ್ತಮಿಗೌಡ ಅವರುಗಳು ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಬಿಜಿಎಸ್ ಮಠದ ಪುರುಷೋತ್ತಮ ಗುರೂಜಿ, ಶಾಸಕರುಗಳಾದ ಪಿ.ರವಿಕುಮಾರ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೆಗೌಡ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ ಶಿವಾನಂದಮೂರ್ತಿ, ನಗರಸಭೆ ಅಧ್ಯಕ್ಷ ಎಂ ಬಿ ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ವೆಂಕಟರಮಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

54 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago