ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ನೋಂದಣಿ ಅವಧಿ ವಿಸ್ತರಣೆ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು ಆನ್‌ಲೈನ್ ಮೂಲಕ ನೋಂದಣಿಯಾಗಿದ್ದು, ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 05 ರಂದು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು 07 ವರೆಗೆ ವಿಸ್ತರಿಸಲಾಗಿದೆ.

ಒಟ್ಟು 6000 ಜನರಿಗೆ ಅವಕಾಶ ಕಲ್ಪಿಸಿದ್ದು, ಮೊದಲು ನೋಂದಣಿಯಾದವರಿಗೆ ಅಧ್ಯತೆ ಕಲ್ಪಿಸಲಾಗುತ್ತದೆ. ನೋಂದಾಯಿತ ಪ್ರತಿನಿಧಿಗಳಿಗೆ ಬ್ಯಾಗ್, ನೋಟ್ ಪ್ಯಾಡ್, ಪೆನ್, ಅಧ್ಯಕ್ಷರ ಭಾಷಣ, ಆಹ್ವಾನ ಪ್ರತಿಕೆ, ಅರ್ಧ ಕೆ.ಜಿ. ಸಕ್ಕರೆ, ಅರ್ಧ ಕೆ.ಜಿ. ಬೆಲ್ಲ ಹಾಗೂ ಐ.ಡಿ. ಕಾರ್ಡ್ಗಳನ್ನು ನೀಡಲಾಗುವುದು ಹಾಗೂ ನೊಂದಾಯಿತ ಪ್ರತಿನಿಧಿಗಳಿಗೆ ಆನ್ಲೈನ್ ನಲ್ಲಿ ಓ.ಓ.ಡಿ ಪ್ರಮಾಣ ಪತ್ರವನ್ನುಸಹ ನೀಡಲಾಗುವುದು.

ಆನ್‌ಲೈನ್ ಮೂಲಕ ನೋಂದಾಣಿಯಾದ ಪ್ರತಿನಿಧಿಗಳಿಗೆ, ಸಮುದಾಯ ಭವನ, ಖಾಸಗಿ ವಸತಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ವಸತಿ ಕಿಟ್ ನಲ್ಲಿ ಹಾಸುವ ಮ್ಯಾಟ್, ಹೊದಿಕೆ, ಏರ್ ಪಿಲ್ಲೋ, ಟೂತ್ ಪೆಸ್ಟ್, ಬ್ರಷ್, ಸೋಪ್ ಹಾಗೂ ಬಾಚಣಿಗೆಯನ್ನು ನೀಡಲಾಗುವುದು. ಆನ್‌ಲೈನ್ ಮೂಲಕ ನೋಂದಣಿಯಾದ ಪ್ರತಿನಿಧಿಗಳು ವಸತಿ ಸ್ಥಳಗಳ ವಿವರವನ್ನು ಆನ್ಲೈನ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಮ್ಮೇಳನಕ್ಕೆ ಹಾಜರಾಗುವವರಿಗೆ ಮಾರ್ಗದರ್ಶನ ನೀಡಲು ಸೇವಾ ಕೇಂದ್ರ ತೆರೆಯಲಾಗಿರುತ್ತದೆ ಎಂದು ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

6 mins ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

30 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

3 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago