ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು ಆನ್ಲೈನ್ ಮೂಲಕ ನೋಂದಣಿಯಾಗಿದ್ದು, ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 05 ರಂದು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು 07 ವರೆಗೆ ವಿಸ್ತರಿಸಲಾಗಿದೆ.
ಒಟ್ಟು 6000 ಜನರಿಗೆ ಅವಕಾಶ ಕಲ್ಪಿಸಿದ್ದು, ಮೊದಲು ನೋಂದಣಿಯಾದವರಿಗೆ ಅಧ್ಯತೆ ಕಲ್ಪಿಸಲಾಗುತ್ತದೆ. ನೋಂದಾಯಿತ ಪ್ರತಿನಿಧಿಗಳಿಗೆ ಬ್ಯಾಗ್, ನೋಟ್ ಪ್ಯಾಡ್, ಪೆನ್, ಅಧ್ಯಕ್ಷರ ಭಾಷಣ, ಆಹ್ವಾನ ಪ್ರತಿಕೆ, ಅರ್ಧ ಕೆ.ಜಿ. ಸಕ್ಕರೆ, ಅರ್ಧ ಕೆ.ಜಿ. ಬೆಲ್ಲ ಹಾಗೂ ಐ.ಡಿ. ಕಾರ್ಡ್ಗಳನ್ನು ನೀಡಲಾಗುವುದು ಹಾಗೂ ನೊಂದಾಯಿತ ಪ್ರತಿನಿಧಿಗಳಿಗೆ ಆನ್ಲೈನ್ ನಲ್ಲಿ ಓ.ಓ.ಡಿ ಪ್ರಮಾಣ ಪತ್ರವನ್ನುಸಹ ನೀಡಲಾಗುವುದು.
ಆನ್ಲೈನ್ ಮೂಲಕ ನೋಂದಾಣಿಯಾದ ಪ್ರತಿನಿಧಿಗಳಿಗೆ, ಸಮುದಾಯ ಭವನ, ಖಾಸಗಿ ವಸತಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ವಸತಿ ಕಿಟ್ ನಲ್ಲಿ ಹಾಸುವ ಮ್ಯಾಟ್, ಹೊದಿಕೆ, ಏರ್ ಪಿಲ್ಲೋ, ಟೂತ್ ಪೆಸ್ಟ್, ಬ್ರಷ್, ಸೋಪ್ ಹಾಗೂ ಬಾಚಣಿಗೆಯನ್ನು ನೀಡಲಾಗುವುದು. ಆನ್ಲೈನ್ ಮೂಲಕ ನೋಂದಣಿಯಾದ ಪ್ರತಿನಿಧಿಗಳು ವಸತಿ ಸ್ಥಳಗಳ ವಿವರವನ್ನು ಆನ್ಲೈನ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಮ್ಮೇಳನಕ್ಕೆ ಹಾಜರಾಗುವವರಿಗೆ ಮಾರ್ಗದರ್ಶನ ನೀಡಲು ಸೇವಾ ಕೇಂದ್ರ ತೆರೆಯಲಾಗಿರುತ್ತದೆ ಎಂದು ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…