ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ನೋಂದಣಿ ಅವಧಿ ವಿಸ್ತರಣೆ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು ಆನ್‌ಲೈನ್ ಮೂಲಕ ನೋಂದಣಿಯಾಗಿದ್ದು, ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 05 ರಂದು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು 07 ವರೆಗೆ ವಿಸ್ತರಿಸಲಾಗಿದೆ.

ಒಟ್ಟು 6000 ಜನರಿಗೆ ಅವಕಾಶ ಕಲ್ಪಿಸಿದ್ದು, ಮೊದಲು ನೋಂದಣಿಯಾದವರಿಗೆ ಅಧ್ಯತೆ ಕಲ್ಪಿಸಲಾಗುತ್ತದೆ. ನೋಂದಾಯಿತ ಪ್ರತಿನಿಧಿಗಳಿಗೆ ಬ್ಯಾಗ್, ನೋಟ್ ಪ್ಯಾಡ್, ಪೆನ್, ಅಧ್ಯಕ್ಷರ ಭಾಷಣ, ಆಹ್ವಾನ ಪ್ರತಿಕೆ, ಅರ್ಧ ಕೆ.ಜಿ. ಸಕ್ಕರೆ, ಅರ್ಧ ಕೆ.ಜಿ. ಬೆಲ್ಲ ಹಾಗೂ ಐ.ಡಿ. ಕಾರ್ಡ್ಗಳನ್ನು ನೀಡಲಾಗುವುದು ಹಾಗೂ ನೊಂದಾಯಿತ ಪ್ರತಿನಿಧಿಗಳಿಗೆ ಆನ್ಲೈನ್ ನಲ್ಲಿ ಓ.ಓ.ಡಿ ಪ್ರಮಾಣ ಪತ್ರವನ್ನುಸಹ ನೀಡಲಾಗುವುದು.

ಆನ್‌ಲೈನ್ ಮೂಲಕ ನೋಂದಾಣಿಯಾದ ಪ್ರತಿನಿಧಿಗಳಿಗೆ, ಸಮುದಾಯ ಭವನ, ಖಾಸಗಿ ವಸತಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ವಸತಿ ಕಿಟ್ ನಲ್ಲಿ ಹಾಸುವ ಮ್ಯಾಟ್, ಹೊದಿಕೆ, ಏರ್ ಪಿಲ್ಲೋ, ಟೂತ್ ಪೆಸ್ಟ್, ಬ್ರಷ್, ಸೋಪ್ ಹಾಗೂ ಬಾಚಣಿಗೆಯನ್ನು ನೀಡಲಾಗುವುದು. ಆನ್‌ಲೈನ್ ಮೂಲಕ ನೋಂದಣಿಯಾದ ಪ್ರತಿನಿಧಿಗಳು ವಸತಿ ಸ್ಥಳಗಳ ವಿವರವನ್ನು ಆನ್ಲೈನ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಮ್ಮೇಳನಕ್ಕೆ ಹಾಜರಾಗುವವರಿಗೆ ಮಾರ್ಗದರ್ಶನ ನೀಡಲು ಸೇವಾ ಕೇಂದ್ರ ತೆರೆಯಲಾಗಿರುತ್ತದೆ ಎಂದು ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago