ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ ಹಳ್ಳಿಗಳಿಂದ ಸಹಸ್ರಾರು ಭಕ್ತರು ಆಗಮಿಸಿ ಸ್ವಾಮಿಯ ರಥೋತ್ಸವಕ್ಕೆ ಬಾಳೆ ಹಣ್ಣು ಜವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು.
ಒಂಭತ್ತು ದಿನಗಳ ಕಾಲ ನಡೆಯುವ ಕರೀಘಟ್ಟ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವ ಕಳೆದ ಫೆಬ್ರವರಿ.28ರಿಂದ ನಡೆಯುತ್ತಿದ್ದು, ಪ್ರತಿ ನಿತ್ಯ ನಿತ್ಯಾರಾಧನೆ, ಮಂಗಳ ಸ್ವಪನ ಮಹಾ ಮಂಗಳಾರತಿ, ಹಂಸವಾಹನ ನಡೆಯುತ್ತಿದೆ. ಅದೇ ರೀತಿ ಇಂದು ಆರನೇ ದಿನ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ವೈಭವದಿಂದ ಜರುಗಿತು.
ಬಿಸಿಲಿನಲ್ಲಿ ಬ್ರಹ್ಮೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿದ್ದು, ಮಧ್ಯಾಹ್ನ ಪ್ರಸಾದವನ್ನು ಸಹ ನೀಡಲಾಯಿತು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…