ಮಂಡ್ಯ

ರಾಜ್ಯದಲ್ಲಿ 6ನೇ ಗ್ಯಾರಂಟಿ ಶೀಘ್ರ : ಕೆಪಿಸಿಸಿ ವಕ್ತಾರ ಕಶ್ಯಪ್‌

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಭೂ ಸಮಸ್ಯೆಗಳ ಸಂಬಂಧಿಸಿದಂತೆ ರೈತರು ಇನ್ನು ಕಂದಾಯ ಇಲಾಖೆಗೆ ಅಲೆಯುವ ಅಗತ್ಯ ಇರುವುದಿಲ್ಲ. ಮನೆಯಲ್ಲೇ ಕುಳಿತು, ಅಥವ ಕೈಬೆರಳಂಚಿನಲ್ಲಿ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳಬಹುದು ಎಂದರು.

ಸರ್ಕಾರ ಆರಂಭವಾಗಿ ಎರಡು ವರ್ಷ ತುಂಬುವ ಹಿನ್ನಲೆ ಮೇ.೨೦ರಂದು ಸಮರ್ಪಣಾ ಸಂಕಲ್ಪ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿ ಏರ್ಪಡಿಸಲಾಗಿದ್ದು, ಅಂದು ೧,೧೧,೧೧೧ ಮಂದಿಗೆ ಹಕ್ಕುಪತ್ರಗಳನ್ನು ವಿತರಿಸುತ್ತಿದ್ದು, ಸರ್ಕಾರ ಬಂದ ೭೭೦ ದಿನಗಳಲ್ಲಿಯೇ ಈ ಸಾಧನೆ ಮಾಡುವ ಮೊದಲ ಸರ್ಕಾರ ನಮ್ಮದಾಗಿದೆ ಎಂದರು.

ಸರ್ಕಾರ ಗ್ಯಾರೆಂಟಿ ಯೋಜನೆಗೆ ಘೋಷಿಸಿ ಕೊಟ್ಟ ಮಾತಿನಂದತೆ ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ೫೨ ಸಾವಿರ ಕೋಟಿ ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ. ಇದೀಗ ಭೂ ಗ್ಯಾರೆಂಟಿ ಮೂಲಕ ಬೆಳೆ ನಷ್ಟ, ಪೋಡಿ ಮುಕ್ತ ಗ್ರಾಮ, ಸಾರ್ವಜನಿಕ ಆಸ್ತಿ ಸಂರಕ್ಷಣೆ, ತ್ವರಿತ ಮತ್ತು ಪಾರದರ್ಶಕ ಭೂ ನ್ಯಾಯ ಸೇರಿದಂತೆ ಹತ್ತು ಹಲವು ಕಂದಾಯ ಸಂಬಂಧಿತ ಸೇವೆಗಳನ್ನು ಸರಳೀಕರಣ ಮಾಡಿದ್ದು, ಮನೆಯಲ್ಲೇ ಕುಳಿದು ಮಧುವೆ ನೊಂದಣಿಯನ್ನು ಮಾಡುವ ಕೆಲಸ ಕಾರ್ಯಗತ ಮಾಡಲಾಗುವುದು, ಸರ್ಕಾರದ ಅವಧಿಯೊಳಗೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರಿನ ಅಭಿವೃದ್ಧಿಗೆ ಬ್ರ್ಯಾಂಡ್ ಬೆಂಗಳೂರು ಯೋಜನೆ, ಸಣ್ಣ ನೀರಾವತಿಯಿಂದ ಟ್ರೀಟೆಡ್ ವಾಟರ್ ಮೂಲಕ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ನೀರು ಒದಗಿಸಲಾಗುವುದು, ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ, ನಾಗಮಂಗಲ ತಾಲೂಕಿನ ೮೮ ಕೆರೆ ತುಂಬಿಸಲು ಯೋಜನೆ, ರಾಜ್ಯಾದ್ಯಂತ ೬೬ ಮೊರಾರ್ಜಿ ದೇಸಾಯಿ ಶಾಲೆಗಳನ್ನು ತೆರೆಯಲು ಯೋಜನೆ, ಇನ್ವೆಸ್ಟ್ ಕರ್ನಾಟಕ ಮೂಲಕ ೬,೫೭,೬೦೦ ಕೋಟಿ ಬಂಡವಾಳ ಆಕರ್ಶಿಸಿದ್ದು, ವಿದೇಶಿ ರಾಷ್ಟ್ರಗಳ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲಿಯೇ ಮೂರನೇ ಸ್ಥಾನ ಅಲಂಕರಿಸಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಚಿದಂಬರ್, ಮಂಜುನಾಥ್, ಪ್ರದೀಪ್, ಸಿ.ಎಂ.ದ್ಯಾವಪ್ಪ ಇದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

18 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

18 hours ago