ಮಂಡ್ಯ

ರಾಜ್ಯದಲ್ಲಿ 6ನೇ ಗ್ಯಾರಂಟಿ ಶೀಘ್ರ : ಕೆಪಿಸಿಸಿ ವಕ್ತಾರ ಕಶ್ಯಪ್‌

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಭೂ ಸಮಸ್ಯೆಗಳ ಸಂಬಂಧಿಸಿದಂತೆ ರೈತರು ಇನ್ನು ಕಂದಾಯ ಇಲಾಖೆಗೆ ಅಲೆಯುವ ಅಗತ್ಯ ಇರುವುದಿಲ್ಲ. ಮನೆಯಲ್ಲೇ ಕುಳಿತು, ಅಥವ ಕೈಬೆರಳಂಚಿನಲ್ಲಿ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳಬಹುದು ಎಂದರು.

ಸರ್ಕಾರ ಆರಂಭವಾಗಿ ಎರಡು ವರ್ಷ ತುಂಬುವ ಹಿನ್ನಲೆ ಮೇ.೨೦ರಂದು ಸಮರ್ಪಣಾ ಸಂಕಲ್ಪ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿ ಏರ್ಪಡಿಸಲಾಗಿದ್ದು, ಅಂದು ೧,೧೧,೧೧೧ ಮಂದಿಗೆ ಹಕ್ಕುಪತ್ರಗಳನ್ನು ವಿತರಿಸುತ್ತಿದ್ದು, ಸರ್ಕಾರ ಬಂದ ೭೭೦ ದಿನಗಳಲ್ಲಿಯೇ ಈ ಸಾಧನೆ ಮಾಡುವ ಮೊದಲ ಸರ್ಕಾರ ನಮ್ಮದಾಗಿದೆ ಎಂದರು.

ಸರ್ಕಾರ ಗ್ಯಾರೆಂಟಿ ಯೋಜನೆಗೆ ಘೋಷಿಸಿ ಕೊಟ್ಟ ಮಾತಿನಂದತೆ ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ೫೨ ಸಾವಿರ ಕೋಟಿ ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ. ಇದೀಗ ಭೂ ಗ್ಯಾರೆಂಟಿ ಮೂಲಕ ಬೆಳೆ ನಷ್ಟ, ಪೋಡಿ ಮುಕ್ತ ಗ್ರಾಮ, ಸಾರ್ವಜನಿಕ ಆಸ್ತಿ ಸಂರಕ್ಷಣೆ, ತ್ವರಿತ ಮತ್ತು ಪಾರದರ್ಶಕ ಭೂ ನ್ಯಾಯ ಸೇರಿದಂತೆ ಹತ್ತು ಹಲವು ಕಂದಾಯ ಸಂಬಂಧಿತ ಸೇವೆಗಳನ್ನು ಸರಳೀಕರಣ ಮಾಡಿದ್ದು, ಮನೆಯಲ್ಲೇ ಕುಳಿದು ಮಧುವೆ ನೊಂದಣಿಯನ್ನು ಮಾಡುವ ಕೆಲಸ ಕಾರ್ಯಗತ ಮಾಡಲಾಗುವುದು, ಸರ್ಕಾರದ ಅವಧಿಯೊಳಗೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರಿನ ಅಭಿವೃದ್ಧಿಗೆ ಬ್ರ್ಯಾಂಡ್ ಬೆಂಗಳೂರು ಯೋಜನೆ, ಸಣ್ಣ ನೀರಾವತಿಯಿಂದ ಟ್ರೀಟೆಡ್ ವಾಟರ್ ಮೂಲಕ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ನೀರು ಒದಗಿಸಲಾಗುವುದು, ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ, ನಾಗಮಂಗಲ ತಾಲೂಕಿನ ೮೮ ಕೆರೆ ತುಂಬಿಸಲು ಯೋಜನೆ, ರಾಜ್ಯಾದ್ಯಂತ ೬೬ ಮೊರಾರ್ಜಿ ದೇಸಾಯಿ ಶಾಲೆಗಳನ್ನು ತೆರೆಯಲು ಯೋಜನೆ, ಇನ್ವೆಸ್ಟ್ ಕರ್ನಾಟಕ ಮೂಲಕ ೬,೫೭,೬೦೦ ಕೋಟಿ ಬಂಡವಾಳ ಆಕರ್ಶಿಸಿದ್ದು, ವಿದೇಶಿ ರಾಷ್ಟ್ರಗಳ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲಿಯೇ ಮೂರನೇ ಸ್ಥಾನ ಅಲಂಕರಿಸಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಚಿದಂಬರ್, ಮಂಜುನಾಥ್, ಪ್ರದೀಪ್, ಸಿ.ಎಂ.ದ್ಯಾವಪ್ಪ ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago