ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್ ಮಾಡಿ ಮಾಲೀಕರು ಕೂಡ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ಮಂಡ್ಯದ ಸಂಜಯ ಸರ್ಕಲ್ನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿದಿದ್ದು, ಮರಾಠಿಗರ ವಿರುದ್ಧ ಆಕ್ರೋಶದ ಕೂಗು ಕೇಳಿಬರುತ್ತಿದೆ.
ಇನ್ನು ಬಂದ್ಗೆ ಕೆಎಸ್ಆರ್ಟಿಸಿ ನೌಕರರು ಕೂಡ ಸಾಥ್ ನೀಡಿದ್ದು, ರಸ್ತೆಯಲ್ಲೇ ಬಸ್ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಸಂಜಯ ವೃತ್ತದಲ್ಲಿ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ಕೆಎಸ್ಆರ್ಟಿಸಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ನಮ್ಮ ಪರವಾಗಿ ಸಂಘಟನೆಗಳು ಬಂದ್ ಮಾಡ್ತಾ ಇವೆ. ಮಹಾರಾಷ್ಟ್ರ ಕಡೆ ಹೋದಾಗ ನಮ್ಮ ಮೇಲೂ ಹಲ್ಲೆ ಆಗಬಹುದು. ಮಹಾರಾಷ್ಟ್ರ ಪೊಲೀಸರು ಅವರಿಗೆ ಸಪೋರ್ಟ್ ಆಗಿ ಇದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿರುವವರಿಗೆ ನಾವು ನುಗ್ಗಿ ಹೊಡೆಯಬೇಕು. ನಮ್ಮ ಪರ ಹೋರಾಟ ಮಾಡುತ್ತಿರುವವರಿಗೆ ಧನ್ಯವಾದಗಳು ಎಂದು ನಿರ್ವಾಹಕರು ಹಾಗೂ ಚಾಲಕರು ಮರಾಠಿಗ ಪುಂಡರ ವಿರುದ್ಧ ಕಿಡಿಕಾರಿದರು.
ಇನ್ನು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ, ರೈತ ಪರ ಹೋರಾಟಗಾರು ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿದರು. ಸಂಜಯ ವೃತ್ತದಿಂದ, ಹೊಳಲು ವೃತ್ತ, ಪೇಟೆ ಬೀದಿ, ವಿವಿ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಬಂದ್ಗೆ ಬೆಂಬಲ ಸೂಚಿಸಿದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…