ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್ ಮಾಡಿ ಮಾಲೀಕರು ಕೂಡ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ಮಂಡ್ಯದ ಸಂಜಯ ಸರ್ಕಲ್ನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿದಿದ್ದು, ಮರಾಠಿಗರ ವಿರುದ್ಧ ಆಕ್ರೋಶದ ಕೂಗು ಕೇಳಿಬರುತ್ತಿದೆ.
ಇನ್ನು ಬಂದ್ಗೆ ಕೆಎಸ್ಆರ್ಟಿಸಿ ನೌಕರರು ಕೂಡ ಸಾಥ್ ನೀಡಿದ್ದು, ರಸ್ತೆಯಲ್ಲೇ ಬಸ್ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಸಂಜಯ ವೃತ್ತದಲ್ಲಿ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ಕೆಎಸ್ಆರ್ಟಿಸಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ನಮ್ಮ ಪರವಾಗಿ ಸಂಘಟನೆಗಳು ಬಂದ್ ಮಾಡ್ತಾ ಇವೆ. ಮಹಾರಾಷ್ಟ್ರ ಕಡೆ ಹೋದಾಗ ನಮ್ಮ ಮೇಲೂ ಹಲ್ಲೆ ಆಗಬಹುದು. ಮಹಾರಾಷ್ಟ್ರ ಪೊಲೀಸರು ಅವರಿಗೆ ಸಪೋರ್ಟ್ ಆಗಿ ಇದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿರುವವರಿಗೆ ನಾವು ನುಗ್ಗಿ ಹೊಡೆಯಬೇಕು. ನಮ್ಮ ಪರ ಹೋರಾಟ ಮಾಡುತ್ತಿರುವವರಿಗೆ ಧನ್ಯವಾದಗಳು ಎಂದು ನಿರ್ವಾಹಕರು ಹಾಗೂ ಚಾಲಕರು ಮರಾಠಿಗ ಪುಂಡರ ವಿರುದ್ಧ ಕಿಡಿಕಾರಿದರು.
ಇನ್ನು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ, ರೈತ ಪರ ಹೋರಾಟಗಾರು ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿದರು. ಸಂಜಯ ವೃತ್ತದಿಂದ, ಹೊಳಲು ವೃತ್ತ, ಪೇಟೆ ಬೀದಿ, ವಿವಿ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಬಂದ್ಗೆ ಬೆಂಬಲ ಸೂಚಿಸಿದರು.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…