ಮಂಡ್ಯ

ಕರ್ನಾಟಕ ಬಂದ್‌: ಸಕ್ಕರೆ ನಾಡು ಮಂಡ್ಯದಲ್ಲಿ ಅಂಗಡಿ ಮುಂಗಟ್ಟು ಬಂದ್‌

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್‌ ಮಾಡಿ ಮಾಲೀಕರು ಕೂಡ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ಮಂಡ್ಯದ ಸಂಜಯ ಸರ್ಕಲ್‌ನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿದಿದ್ದು, ಮರಾಠಿಗರ ವಿರುದ್ಧ ಆಕ್ರೋಶದ ಕೂಗು ಕೇಳಿಬರುತ್ತಿದೆ.

ಇನ್ನು ಬಂದ್‌ಗೆ ಕೆಎಸ್‌ಆರ್‌ಟಿಸಿ ನೌಕರರು ಕೂಡ ಸಾಥ್‌ ನೀಡಿದ್ದು, ರಸ್ತೆಯಲ್ಲೇ ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಸಂಜಯ ವೃತ್ತದಲ್ಲಿ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ನಮ್ಮ ಪರವಾಗಿ ಸಂಘಟನೆಗಳು ಬಂದ್ ಮಾಡ್ತಾ ಇವೆ. ಮಹಾರಾಷ್ಟ್ರ ಕಡೆ ಹೋದಾಗ ನಮ್ಮ ಮೇಲೂ ಹಲ್ಲೆ ಆಗಬಹುದು. ಮಹಾರಾಷ್ಟ್ರ ಪೊಲೀಸರು ಅವರಿಗೆ ಸಪೋರ್ಟ್ ಆಗಿ ಇದ್ದಾರೆ. ನಮ್ಮ‌ ಮೇಲೆ ಹಲ್ಲೆ ಮಾಡಿರುವವರಿಗೆ ನಾವು ನುಗ್ಗಿ ಹೊಡೆಯಬೇಕು. ನಮ್ಮ ಪರ ಹೋರಾಟ ಮಾಡುತ್ತಿರುವವರಿಗೆ ಧನ್ಯವಾದಗಳು ಎಂದು ನಿರ್ವಾಹಕರು ಹಾಗೂ ಚಾಲಕರು ಮರಾಠಿಗ ಪುಂಡರ ವಿರುದ್ಧ ಕಿಡಿಕಾರಿದರು.

ಇನ್ನು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಕನ್ನಡ ಪರ, ರೈತ ಪರ ಹೋರಾಟಗಾರು ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿದರು. ಸಂಜಯ ವೃತ್ತದಿಂದ, ಹೊಳಲು ವೃತ್ತ, ಪೇಟೆ ಬೀದಿ, ವಿವಿ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಬಂದ್‌ಗೆ ಬೆಂಬಲ ಸೂಚಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago