ಮಂಡ್ಯ

ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆಯನ್ನು ಜಿಲ್ಲೆಗೆ ಅದ್ದೂರಿಯಾಗಿ ಸ್ವಾಗತಿಸಿ: ಡಾ ಹೆಚ್ ಎಲ್ ನಾಗರಾಜು

ಮಂಡ್ಯ: ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆಯೂ ರಾಜ್ಯಾದ್ಯಂತ ಸಂಚರಿಸಲಿದ್ದು, ರಾಮನಗರ ಜಿಲ್ಲೆಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲೆಗೆ ಆಗಮಿಸಲಿದೆ. ಜ್ಯೋತಿ ರಥ ಯಾತ್ರೆಯನ್ನು ಅದ್ದೂರಿಯಾಗಿ ಜಿಲ್ಲೆಗೆ ಸ್ವಾಗತಿಸೋಣ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ತಿಳಿಸಿದರು.

ಅವರು ಶುಕ್ರವಾರ(ಆ.10) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸುವ ಕುರಿತು ಸಭೆ ನಡೆಸಿ ಮಾತನಾಡಿದರು.

1973 ರಲ್ಲಿ ಮೈಸೂರು ಪ್ರಾಂತ್ಯಕ್ಕೆ ಹೊಸದಾಗಿ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು. ಈ ಹಿನ್ನೆಲೆ ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷಗಳು ಕಳೆದಿದ್ದು, ಅದರ ಸುವರ್ಣ ಸಂಭ್ರಮಾಚಾರಣೆಯನ್ನು ಆಚರಿಸಲಾಗುತ್ತಿದೆ. ಈ ಸಂಬಂಧ ಜ್ಯೋತಿ ರಥ ಯಾತ್ರೆಯು ಆಗಸ್ಟ್ 18 ರಿಂದ 25 ರ ವರೆಗೆ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಲಿದ್ದು, ಜಿಲ್ಲೆಯ ಪ್ರತಿಯೊಬ್ಬರೂ ರಥವನ್ನು ಸ್ವಾಗತಿಸಿ ಯಾತ್ರೆಯಲ್ಲಿ ಪಾಲ್ಗೊಳ್ಳೋಣ ಎಂದರು.

ಜ್ಯೋತಿ ರಥ ಯಾತ್ರೆಯು ಆಗಸ್ಟ್ 18 ರಂದು – ಮದ್ದೂರು,  19 ರಂದು – ನಾಗಮಂಗಲ,  20 ರಂದು – ಕೆ ಆರ್ ಪೇಟೆ,  21 ರಂದು – ಪಾಂಡವಪುರ,  22 ರಂದು – ಶ್ರೀರಂಗಪಟ್ಟಣ,  23 ರಂದು – ಮಂಡ್ಯ, 24 ರಂದು – ಮಳವಳ್ಳಿ ತಾಲ್ಲೂಕಿನಲ್ಲಿ ಸಂಚಾರಿಸಲಿದೆ. ಆಗಸ್ಟ್ 25 ರಂದು ಚಾಮರಾಜನಗರ ಜಿಲ್ಲೆ ತಲುಪಲಿದೆ ಎಂದರು.

ಸ್ಥಳೀಯ ಆಡಳಿತಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ನ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಿಡಿಒ ಗಳು, ಜನ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸಂಬAಧಪಟ್ಟ ಸಭೆ ನಡೆಸಿ. ಎಲ್ಲರೂ ಒಟ್ಟಾಗಿ ಸೇರಿಕೊಂಡು ಜ್ಯೋತಿ ರಥ ಯಾತ್ರೆಯನ್ನು ಬರಮಾಡಿಕೊಂಡು ಯಶಸ್ವಿಯಾಗಿ ಸ್ವಾಗತಿಸೋಣ ಎಂದರು.

ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆ ಸಂಚರಿಸುವ ಮಾರ್ಗದಲ್ಲಿ ಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಕಚೇರಿಗಳು ಹಬ್ಬದ ರೀತಿ ಮಾರ್ಗವನ್ನು ಶೃಂಗರಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಬೇಕು ಎಂದರು.

ಜ್ಯೋತಿ ರಥ ಯಾತ್ರೆಯೂ ಸರ್ಕಾರವು ನಿಗಧಿಪಡಿಸಿರುವ ರೂಟ್ ಮ್ಯಾಪ್ ನಲ್ಲಿಯೇ ಸಂಚರಿಸಬೇಕು. ಯಾವುದೇ ಬದಲಾವಣೆಗೆ ಅವಕಾಶವಿಲ್ಲ.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪುರಸಭೆಗಳು, ಶಾಲಾ ಕಾಲೇಜುಗಳು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜ್ಯೋತಿ ರಥ ಯಾತ್ರೆಯ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳಬೇಕು. ರಥವು ಸಂಚಾರಿಸುವ ಸ್ಥಳದಲ್ಲೆಲ್ಲ ಕನ್ನಡ ಘೋಷಣೆಗಳು, ಡೊಳ್ಳು ಕುಣಿತ ಮೆರವಣಿಗೆ, ವಿವಿಧ ಕಲಾತಂಡಗಳು ತಮ್ಮ ಕಲಾಪ್ರದರ್ಶನದೊಂದಿಗೆ ಪಾಲ್ಗೊಳ್ಳುವಂತೆ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಜಿಲ್ಲೆಯಲ್ಲಿ ರಥ ಯಾತ್ರೆಯು ಸಂಚಾರಿಸುವ ಮಾರ್ಗಗಳನ್ನು ಸವಿವರವಾಗಿ ಅವರು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶಿವಮೂರ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್, ಪಾಂಡವಪುರ ಉಪ ವಿಭಾಗಾಧಿಕಾರಿ ನಂದೀಶ್, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ ಚೆಲುವಯ್ಯ, ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕಿ ಡಾ ರೋಹಿಣಿ, ತಹಶಿಲ್ದಾರ್ ಗ್ರೇಡ್ – 2 ವಸಂತಕುಮಾರ್, ಮುಖಂಡರುಗಳಾದ ಸುಜಾತ ಕೃಷ್ಣ, ಬಿ ಎಂ ಅಪ್ಪಾಜಪ್ಪ, ಆನಂದ್, ಅರುಣ ಕುಮಾರಿ, ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago