ಮಂಡ್ಯ

ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಚಾಲನೆ ನೀಡಿದ ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ತೆರಿಗೆ ಹಣ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಮತ್ತು ಜೆಡಿಎಸ್‌ ಸಂಸದರು ಯಾರಾದರೂ ಸರಿಯೇ ಕೇಂದ್ರದ ವಿರುದ್ಧ ಬಾಯಿ ಬಿಡಲ್ಲ. ಅಲ್ಲದೇ ಕೇಂದ್ರ ಸರ್ಕಾರ ಮೇಕೆದಾಟು, ಮಹಾದಾಯಿ ಯೋಜನೆ ಹಾಗೂ ತುಂಗಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕ್ಲೀಯರೆನ್ಸ್‌ ನೀಡದೆ ಅನುದಾನವನ್ನು ಹಿಡಿದಿಟ್ಟುಕೊಂಡರೂ ಸಹ ಸಂಸತ್‌ ಅಧಿವೇಶನದ ಸಂದರ್ಭದಲ್ಲಿ ಕರ್ನಾಟಕದ ಸಂಸದರು ಮೌನವಾಗಿರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯಗಳ ಅಭಿವೃದ್ಧಿ ವಿಚಾರಕ್ಕೆ ಬಂದರೆ ಕರ್ನಾಟಕಕ್ಕಿಂತ ಹಿಂದಿರುವ ಉತ್ತರ ಭಾರತದ ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅಧಿಕ ಅನುದಾನವನ್ನು ಬಿಡುಗಡೆ ಮಾಡುತ್ತದೆ ಎಂದು ಆರೋಪಿಸಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂದಾಯ ಮಾಡುವ ಸಾಲಿನಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರ ಪ್ರತಿಬಾರಿಯೂ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿದೆ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

22 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

22 hours ago