ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ ತಂಡ ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡಿತು.
ಸಿಐಡಿ ಡಿವೈಎಸ್ಪಿ ಉಮೇಶ್ ಹಾಗೂ ಸಬ್ಇನ್ಸ್ಪೆಕ್ಟರ್ ದೇವರಾಜ್ ಅವರು ಕತ್ತರಘಟ್ಟ ಗ್ರಾಮಕ್ಕೆ ತೆರಳಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದು, ಇವರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಜಯಕುಮಾರ್ ಅವರ ಸಾವು ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ ವಿದೆ ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆರೋಪಿಸಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದವು.
ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಸಜೀವವಾಗಿ ಸುಟ್ಟು ಹಾಕಿರುವ ಆರೋಪವಿದೆ. ಜಯಕುಮಾರ್ ಅವರ ಜಮೀನಿನಲ್ಲಿ ಅನಿಲ್ ಕುಮಾರ್ ಎಂಬವರು ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲಿನ ಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಮೇ ೧೬ರಂದು ಜಯಕುಮಾರ್ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್ ಕುಮಾರ್ ವಿರುದ್ಧ ದೂರು ನೀಡಿದ್ದರು.
ಮರುದಿನವೇ ಅವರನ್ನು ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪ್ರಸ್ತುತ ಆರೋಪಿ ಸ್ಥಾನದಲ್ಲಿರುವ ಅನಿಲ್ ಕುಮಾರ್ ನ್ಯಾಯಾಂಗ ಬಂಧನಲ್ಲಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…