ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ ತಂಡ ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡಿತು.
ಸಿಐಡಿ ಡಿವೈಎಸ್ಪಿ ಉಮೇಶ್ ಹಾಗೂ ಸಬ್ಇನ್ಸ್ಪೆಕ್ಟರ್ ದೇವರಾಜ್ ಅವರು ಕತ್ತರಘಟ್ಟ ಗ್ರಾಮಕ್ಕೆ ತೆರಳಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದು, ಇವರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಜಯಕುಮಾರ್ ಅವರ ಸಾವು ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ ವಿದೆ ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆರೋಪಿಸಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದವು.
ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಸಜೀವವಾಗಿ ಸುಟ್ಟು ಹಾಕಿರುವ ಆರೋಪವಿದೆ. ಜಯಕುಮಾರ್ ಅವರ ಜಮೀನಿನಲ್ಲಿ ಅನಿಲ್ ಕುಮಾರ್ ಎಂಬವರು ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲಿನ ಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಮೇ ೧೬ರಂದು ಜಯಕುಮಾರ್ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್ ಕುಮಾರ್ ವಿರುದ್ಧ ದೂರು ನೀಡಿದ್ದರು.
ಮರುದಿನವೇ ಅವರನ್ನು ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪ್ರಸ್ತುತ ಆರೋಪಿ ಸ್ಥಾನದಲ್ಲಿರುವ ಅನಿಲ್ ಕುಮಾರ್ ನ್ಯಾಯಾಂಗ ಬಂಧನಲ್ಲಿದ್ದಾರೆ.
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…