ಮಂಡ್ಯ

ಕತ್ತರಘಟ್ಟ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ ತಂಡ ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡಿತು.

ಸಿಐಡಿ ಡಿವೈಎಸ್‌ಪಿ ಉಮೇಶ್ ಹಾಗೂ ಸಬ್‌ಇನ್‌ಸ್ಪೆಕ್ಟರ್ ದೇವರಾಜ್ ಅವರು ಕತ್ತರಘಟ್ಟ ಗ್ರಾಮಕ್ಕೆ ತೆರಳಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದು, ಇವರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.

ಜಯಕುಮಾರ್ ಅವರ ಸಾವು ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ ವಿದೆ ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆರೋಪಿಸಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದವು.

ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಸಜೀವವಾಗಿ ಸುಟ್ಟು ಹಾಕಿರುವ ಆರೋಪವಿದೆ. ಜಯಕುಮಾರ್ ಅವರ ಜಮೀನಿನಲ್ಲಿ ಅನಿಲ್ ಕುಮಾರ್ ಎಂಬವರು ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲಿನ ಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಮೇ ೧೬ರಂದು ಜಯಕುಮಾರ್ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್ ಕುಮಾರ್ ವಿರುದ್ಧ ದೂರು ನೀಡಿದ್ದರು.

ಮರುದಿನವೇ ಅವರನ್ನು ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪ್ರಸ್ತುತ ಆರೋಪಿ ಸ್ಥಾನದಲ್ಲಿರುವ ಅನಿಲ್ ಕುಮಾರ್ ನ್ಯಾಯಾಂಗ ಬಂಧನಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago