ಮಂಡ್ಯ

ಕತ್ತರಘಟ್ಟ ಪ್ರಕರಣ : ಸಮಗ್ರ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ತಿದ್ದುಪಡಿ ಕಾಯ್ದೆ -2015 ಹಾಗೂ ತಿದ್ದುಪಡಿ ನಿಯಮಗಳು 2016 ಅನ್ನು ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಜಾರಿಯಲ್ಲಿದ್ದು, ಇದರ ಬಗ್ಗೆ ಜನರಿಗೆ ತಿಳಿದಿದ್ದರು. ಪ್ರಕರಣಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಘಟನೆಯಲ್ಲಿ ದೊರೆತ ಸಾಕ್ಷಿಗಳನ್ನು ಎಫ್.ಎಸ್. ಎಲ್ ಗೆ ರವಾನಿಸಲಾಗಿದೆ, ಘಟನೆ ನಡೆದ ಹಿಂದಿನ ದಿನ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲು ಮಾಡಿಕೊಳ್ಳದೆ ಇರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ‌ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದಿಂದ ಮೃತರ ಪತ್ನಿ ಹಾಗೂ ಮಕ್ಕಳಿಗೆ ಕಾನೂನು ವ್ಯಾಪ್ತಿಯಲ್ಲಿ ಒದಗಿಸಬಹುದಾದ ಸೌಲಭ್ಯಗಳ ಬಗ್ಗೆ ಯೋಜಿಸಿದೆ. ರೂ 8.25 ಲಕ್ಷ ಪರಿಹಾರ ಮಂಜೂರು ಮಾಡಲಾಗಿದ್ದು, ರೂ4.12 ಲಕ್ಷ ಪರಿಹಾರ ಚೆಕ್ ನೀಡಲಾಗಿದೆ. ಚಾಜ್೯ ಶೀಟ್ ಸಲ್ಲಿಕೆಯಾದ ನಂತರ ಉಳಿದ ಪರಿಹಾರ ಹಣವನ್ನು ಸಹ ನೀಡಲಾಗುವುದು ತಿಂಗಳಿಗೆ ರೂ 5000 ಹಣವನ್ನು ಪಿಂಚಣಿಯಾಗಿ ನೀಡಲಾಗುವುದು ಎಂದು ಹೇಳಿದರು.

ಮೃತರ ಕುಟುಂಬದ ಹೆಸರಿನಲ್ಲಿ ಇರುವ 1ಎಕರೆ 20 ಕುಂಟೆ ಜಮೀನಿದ್ದು, ಇದಕ್ಕೆ ಪೌತಿ ಖಾತೆ ಮಾಡಿಕೊಡಲು ಹಾಗೂ ಮನೆಯ ದುರಸ್ತಿ ಮಾಡಿಕೊಡಲು ಕ್ರಮವಹಿಸಲಾಗುವುದು. ಗಂಗಾ ಕಲ್ಯಾಣ ಯೋಜನೆಯಡಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊಳವೆ ಬಾವಿ ಕೊರಿಸಲಾಗುವುದು ಎಂದರು.

ಮೃತರಿಗೆ ಇಬ್ಬರು ಮಕ್ಕಳಿದ್ದು, ಅವರ ತಾಯಿ ಇಚ್ಛಿಸಿದಲ್ಲಿ ಹತ್ತಿರದ ಆಶ್ರಮ ಶಾಲೆ ಅಥವಾ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾಭ್ಯಾಸ ಯೋಜನೆಯಡಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಉಚಿತ ಶಿಕ್ಷಣಕ್ಕೆ ವ್ಯವಸ್ಥ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಎಫ್.ಐ.ಆರ್ ಆದ 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು, ವಿಚಾರಣೆಯ ಸಂದರ್ಭದಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಸಿ ತಪ್ಪಿತಸ್ಥ ಕ್ರಮ ಜಾರಿಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ರಂಗಸ್ವಾಮಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ಮ ಆದರ್ಶ್, ಸ್ಮಿತಾ ಹಾಗೂ ಸಮಿತಿ ಸದಸ್ಯರಾದ ಕೆರಗೋಡು ಸೋಮಶೇಖರ್, ಮಾರಕಾಳು ಮಾಧು, ಆನಂದ್, ವಿಶ್ವನಾಥ್, ಗುರಪ್ಪ, ಉಬೇದುಲ್ಲ, ನರಸಿಂಹಮೂರ್ತಿ, ನಾಗರತ್ನ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago