ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಕಚೇರಿ ಸಮೀಪ ಆರಂಭಿಸಿದೆ.
ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ.ಟಿ.ಲಲಿತಾನಾಯಕ್ ಅವರು, ಮೇ 17 ರಂದು ಜಯಕುಮಾರ್ ಅವರ ಸಾವಿನ ನಂತರ ಅವರ ಮಡದಿ, ನನ್ನ ಗಂಡನನ್ನು ಅನಿಲ್ ಕುಮಾರ್ ಎಂಬವರು ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರೂ, ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಎಂದು ಬದಲಾಯಿಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ಕರ್ತವ್ಯಲೋಪ ಎಸಗಿರುವ ಎಲ್ಲ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಬೇಕು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮವಹಿಸಲು ಜಿಲ್ಲಾಧಿಕಾರಿಗಳೂ ಮುಂದಾಗಿಲ್ಲ. ಆದಕಾರಣ ಡಿಐಜಿ ಬೋರಲಿಂಗಯ್ಯ ಅವರು ಸ್ಥಳಕ್ಕೆ ಆಗಮಿಸಬೇಕು. ಇಲ್ಲವಾದಲ್ಲಿ ಗೃಹ ಸಚಿವರು, ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.
ಕೆಎಸ್ಎಸ್ ಮುಖಂಡ ಎಚ್.ಎನ್. ನರಸಿಂಹಮೂರ್ತಿ, ದಸಂಸ ಕೃಷ್ಣ, ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಎವಿಎಸ್ಎಸ್ನ ಬಾಲರಾಜು, ದ್ರಾವಿಡ ಕನ್ನಡಿಗರು ವಿದ್ಯಾಸಾಗರ, ಎಚ್.ಡಿ. ಜಯರಾಂ, ಕಣಿವೆ ಯೋಗೇಶ್ ಇತರರು ಧರಣಿಯಲ್ಲಿ ಭಾಗವಹಿಸಿದ್ದರು.
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…