ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಕಚೇರಿ ಸಮೀಪ ಆರಂಭಿಸಿದೆ.
ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ.ಟಿ.ಲಲಿತಾನಾಯಕ್ ಅವರು, ಮೇ 17 ರಂದು ಜಯಕುಮಾರ್ ಅವರ ಸಾವಿನ ನಂತರ ಅವರ ಮಡದಿ, ನನ್ನ ಗಂಡನನ್ನು ಅನಿಲ್ ಕುಮಾರ್ ಎಂಬವರು ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರೂ, ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಎಂದು ಬದಲಾಯಿಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ಕರ್ತವ್ಯಲೋಪ ಎಸಗಿರುವ ಎಲ್ಲ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಬೇಕು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮವಹಿಸಲು ಜಿಲ್ಲಾಧಿಕಾರಿಗಳೂ ಮುಂದಾಗಿಲ್ಲ. ಆದಕಾರಣ ಡಿಐಜಿ ಬೋರಲಿಂಗಯ್ಯ ಅವರು ಸ್ಥಳಕ್ಕೆ ಆಗಮಿಸಬೇಕು. ಇಲ್ಲವಾದಲ್ಲಿ ಗೃಹ ಸಚಿವರು, ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.
ಕೆಎಸ್ಎಸ್ ಮುಖಂಡ ಎಚ್.ಎನ್. ನರಸಿಂಹಮೂರ್ತಿ, ದಸಂಸ ಕೃಷ್ಣ, ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಎವಿಎಸ್ಎಸ್ನ ಬಾಲರಾಜು, ದ್ರಾವಿಡ ಕನ್ನಡಿಗರು ವಿದ್ಯಾಸಾಗರ, ಎಚ್.ಡಿ. ಜಯರಾಂ, ಕಣಿವೆ ಯೋಗೇಶ್ ಇತರರು ಧರಣಿಯಲ್ಲಿ ಭಾಗವಹಿಸಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…