ಮಂಡ್ಯ

ಕತ್ತರಘಟ್ಟ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಪಿ.ಎಂ. ನರೇಂದ್ರಸ್ವಾಮಿ ಸೂಚನೆ

ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.

ಸದನ ಸಮಿತಿ ಸದಸ್ಯರು, ವಿಧಾನ ಸಭೆ ಸಚಿವಾಲಯ ಹಾಗೂ ಮಂಡ್ಯ ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಗುರುವಾರ ಬೆಳಗ್ಗೆ ಕೆ.ಆರ್. ಪೇಟೆ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಮೃತ ಜಯಕುಮಾರ್ ಸ್ವಗ್ರಾಮ ಕತ್ತರಘಟ್ಟದ ನಿವಾಸ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.

ಸುಟ್ಟುಕರಕಲಾಗಿರುವ ಸ್ಥಿತಿಯಲ್ಲಿ ದೊರೆತಿರುವ ಶವದ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಮೃತ ಕುಟುಂಬಸ್ಥರ ಜೊತೆ ಸಮಗ್ರವಾಗಿ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಪೊಲೀಸ್ ಹಾಗೂ ಜಿಲ್ಲಾಡಳಿತದ ಪ್ರಮುಖರೊಂದಿಗೂ ಚರ್ಚಿಸಲಾಗಿದ್ದು, ಘಟನೆಯ ಆರಂಭಿಕ ವೈಫಲ್ಯ ಹೊರತುಪಡಿಸಿ, ಪ್ರಸ್ತುತ ತನಿಖೆ ಸರಿದಾರಿಯಲ್ಲಿ ಸಾಗುತ್ತಿದ್ದು, ಸಮಗ್ರ ತನಿಖೆಗೆ ನಿರ್ದೇಶಿಸಲಾಗಿದೆ ಎಂದರು.

ಮೃತನ ವಾರಸುದಾರರಿಂದ ಘಟನೆಯ ಸಮಗ್ರ ಮಾಹಿತಿ ಅರಿತು ಕುಟುಂಬಕ್ಕೆ ರಕ್ಷಣೆ, ಸದರಿ ಜಮೀನು ಹಸ್ತಾಂತರ, ಕುಟುಂಬಕ್ಕೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸಮಾಜ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಹಲವು ಅನುಮಾನ ;
ಮೃತ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ಕುಟುಂಬಸ್ಥರಿಂದ ವ್ಯಕ್ತವಾಗಿದ್ದು, ಸೂಕ್ಷ್ಮತೆ ಅರಿತು ತನಿಖೆ ನಡೆಸುವಂತೆ ಪೊಲೀಸ್ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದ್ದು, ವಾಸ್ತವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೃತ ಜಯಕುಮಾರ್ ಸಾವಿಗೂ ಮುನ್ನ ರೌಡಿಶೀಟರ್ ವ್ಯಕ್ತಿಯೊಬ್ಬನ ಮೇಲೆ ದೂರು ನೀಡಿದ್ದರೂ, ನಿರ್ಲಕ್ಷ್ಯ ವಹಿಸಿರುವ ಪೊಲೀಸರ ಆರಂಭಿಕ ವೈಫಲ್ಯ ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಸದನ ಸಮಿತಿ ಸದಸ್ಯರಾದ ಹಂಪಣ್ಣನಾಯಕ್, ಚಂದ್ರಪ್ಪ, ಪ್ರಸಾದ್ ಅಬ್ಬಯ್ಯ, ಡಾ. ತಿಮ್ಮಯ್ಯ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿ ಅರುಣ್ ಚಕ್ರವರ್ತಿ, ಸಮಾಜ ಕಲ್ಯಾಣ ಇಲಾಖೆ ಆಯಕ್ತ ರಾಕೇಶ್‌ ಕುಮಾರ್, ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಬೋರಲಿಂಗಯ್ಯ, ಡಿಸಿಆರ್‌ಇ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಧರಣಿದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಬಳಿಕ ದಲಿತ ಮುಖಂಡರಿಂದ ಘಟನೆ ಕುರಿತಂತೆ ಅಹವಾಲು ಸ್ವೀಕರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago