ಮಂಡ್ಯ: ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ಐದನೇ ಹಂತದ ಯೋಜನೆಗೆ ಚಾಲನೆ ನೀಡಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಯೋಜನೆ ಚಾಲನೆ ಬಳಿಕ ದಶಕದ ಕನಸಿನ ಯೋಜನೆಗೆ ಮರುಜೀವ ಸಿಕ್ಕಂತಾಗಿದ್ದು, 4336 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ನಿರ್ಮಿಸಲಾಗಿದೆ.
ಈ ಯೋಜನೆಯಿಂದ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಯೋಜನೆಯಿಂದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಸಿಕ್ಕಿದಂತಾಗಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…