ಮಂಡ್ಯ

ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಶಾಸಕ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ದೇಶದ ಪುಣ್ಯ ನದಿಗಳಲ್ಲಿ ಕಾವೇರಿಯೂ ಒಂದು. ಅತ್ಯಂತ ಶ್ರೇಷ್ಠವಾದ ತಾಯಿ ಕಾವೇರಿಗೆ ಪೂಜೆ ಸಲ್ಲಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲಿ ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಎಲ್ಲ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಇಂದಿನ ಸಚಿವ ಸಂಪುಟವು 92 ಕೋಟಿ ರೂಪಾಯಿಗೆ ಅನುಮೋದನೆಯನ್ನು ನೀಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವ ಸಂಬಂಧ ಈ ಹಿಂದೆ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮನವಿ ಮಾಡಿದ್ದನ್ನು ಸ್ಮರಿಸಬಹುದು.

ಆಂದೋಲನ ಡೆಸ್ಕ್

Recent Posts

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

6 mins ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

33 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

43 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

48 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

51 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

54 mins ago