ಮಂಡ್ಯ

ʻಕಾವೇರಿ ದೀಪಾರತಿʼ ಮೌಢ್ಯ ಆಚಾರಣೆ: ವೆಂಕಟಗಿರಿಯಯ್ಯ

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅವರು ಸರ್ಕಾರ ಹಾಗೂ  ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿಯ ಎರಗಿರುವ ಗಂಡಾಂತರ ನಿವಾರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡದೇ, ಕಾವೇರಿ ದೀಪಾರತಿ ಮೂಲಕ ಮೌಢ್ಯಾಚರಣೆ, ಮತ್ತು ಭಾವನಾತ್ಮಕವಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ ಎಂದು ದೂರಿದರು.

ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಭಾಗದ ಜನ ಜಾನುವಾರುಗಳ ಕುಡಿಯುವ ನೀರಿನ ಜೀವನಾಡಿಯಾಗಿರುವ ಕಾವೇರಿ ನದಿಯನ್ನು ಶುದ್ದವಾಗಿರಿಸಿಕೊಳ್ಳಲು ಸರ್ಕಾರ ವಿಫಲವಾಗಿದ್ದು, ಮೈಸೂರು, ಶ್ರೀರಂಗಪಟ್ಟಣ ಭಾಗದ ಕೊಳಚೆ ನೀರು ನದಿ ಸೇರುವುದನ್ನು ತಡೆಯಲು, ಕಾವೇರಿ ಅಚ್ಚುಕಟ್ಟು ಭಾಗದ ರೈತರ ಬೆಳೆಗಳಿಗೆ ನೀರು ವೈಜ್ಞಾನಿಕವಾಗಿ ಸದ್ಬಳಕೆ ಮಾಡಿಕೊಳ್ಳಲು ಕಾರ್ಯತಂತ್ರ ರೂಪಿಸಲು ಮುಂದಾಗಬೇಕೆಂದು ಒತ್ತಾಯ ಮಾಡಿದರು.

ತಮಿಳುನಾಡಿನಿಂದ ನಮ್ಮ ಭಾಗದ ನೀರು ಕಸಿಯುವ ಷಡ್ಯಂತ್ರ ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರ ವಿಫಲವಾಗಿದ್ದು, ಕೇಂದ್ರ ಸರ್ಕಾರವೂ ಭಾರತ ಸಂವಿಧಾನದ ಕಾಲಂ ೨೬೨ರಡಿ ರಾಷ್ಟ್ರೀಯ ಜಲ ನೀತಿ ರೂಪಿಸಿ ಎಲ್ಲ ರಾಜ್ಯಗಳಿಗೂ ಸಮಾನವಾದ ನೀರಿನ ಸೌಲಭ್ಯ ಕಲ್ಪಿಸಲು ವಿಫಲವಾಗಿದೆ. ಇದರಿಂದ ಕರ್ನಾಟಕ ಜಲ ಸಂಪನ್ಮೂಲ ಲೂಟಿಯಾಗುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಕಾವೇರಿ ಬಗ್ಗೆ ಗೌರವವಿದ್ದಲ್ಲಿ ನದಿಗಿರುವ ಆಂತರಿಕ, ಕಾವೇರಿ ಆರತಿಯನ್ನು ಕೈಬಿಟ್ಟು, ನದಿಗೆ ಎರಗಿರುವ ಭಾಹ್ಯ ಗಂಡಾಂತರ ನಿವಾರಿಸಿ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನರಿಗೆ ಜಾಗೃತಿಗೆ ನೆರವಾಗುವ ಕಾರ್ಯತಂತ್ರ ರೂಪಿಸಬೇಕು, ಆರತಿಗಿಟ್ಟ ಅನುದಾನದಿಂದ ಕಾವೇರಿ ನೀರು ಸದ್ಬಳಕೆ, ಸಂಶೋಧನಾ ತರಬೇತಿ ತೆರೆಯುವಂತೆ ಮನವಿ ಮಾಡಿದರು.

ಸರ್ಕಾರ ಕೊಳಚೆ ನೀರು ನದಿ ಸೇರುವುದನ್ನು ತಡೆಯಲು, ಕಾವೇರಿ ಅಚ್ಚುಕಟ್ಟು ಭಾಗದ ರೈತರ ಬೆಳೆಗಳಿಗೆ ನೀರು ವೈಜ್ಞಾನಿಕವಾಗಿ ಸದ್ಬಳಕೆ ಮಾಡಿಕೊಳ್ಳಲು ಕಾರ್ಯತಂತ್ರ ರೂಪಿಸಲು ಆದ್ಯತೆ ನೀಡದೆ ಅನಗತ್ಯ ವಿಚಾರಕ್ಕೆ ಮುಂದಾಗಿರುವುದು ಸರಿಯಲ್ಲ. ನಾಡಿಗೆ ವೈಚಾರಿಕ, ವೈಜ್ಞಾನಿಕ ಸ್ಪರ್ಶ ನೀಡಿ, ಜನಾಭಿವೃದ್ಧಿ, ರಾಜ್ಯದ ಅಭಿವೃದ್ಧಿ ಕಡೆಗೆ ಸರ್ಕಾರ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್‌ಕುಮಾರ್ ಕೆರಗೋಡು, ಜಿಲ್ಲಾಧ್ಯಕ್ಷ ಬಿ.ಆನಂದ್, ಮುದ್ದರಾಜು, ದೇವರಾಜು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

1 hour ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

2 hours ago