ಮಂಡ್ಯ

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

ಮಂಡ್ಯ: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.

ಸೋಮವಾರ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ, ಬಳಿಕ ಮಾತನಾಡಿದ ಅವರು, ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ. ಆದರೆ ಕೆ ಆರ್ ಎಸ್ ನ ಕಾವೇರಿ ಎಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರುವಾಸಿಯಾಗಿದ್ದು, ಒಂದು ಭಾವನಾತ್ಮಕ ಅಣೆಕಟ್ಟಾಗಿದೆ. ಇದಕ್ಕಿಂತ ದೊಡ್ಡ ಅಣೆಕಟ್ಟುಗಳು ರಾಜ್ಯದಲ್ಲಿ ಇದ್ದರೂ ಸಹ ಕೆ ಆರ್ ಎಸ್ ನಷ್ಟು ಮನಸೆಳೆದಿರುವ ಅಣೆಕಟ್ಟು ಯಾವುದು ಇಲ್ಲ. ಇಂತಹ ಅಣೆಕಟ್ಟಿನ ನಿರ್ಮಾಣಕ್ಕೆ ಕಾರಣರಾಗಿರುವಂತಹ ನಾಲ್ವಡಿ ಕೃಷ್ಣ ರಾಜ ಒಡೆಯರ್ ಮಹಾರಾಜರು ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರ ಕೀರ್ತಿಯನ್ನು ಪ್ರತಿಯೊಬ್ಬರೂ ಒಪ್ಪಲೇಬೇಕು ಎಂದರು.

ನಮ್ಮ ಸರ್ಕಾರವು ಕೇವಲ ಆಡಳಿತ ಮಾಡಲಿಕ್ಕೆ ಮಾತ್ರ ಬಂದಿಲ್ಲ. ಜಿಲ್ಲೆಯ ಎಲ್ಲಾ ರೈತರ ಪರವಾದ ಯೋಜನೆಗಳನ್ನು ನೀಡಿ, ಜನತೆಯ ಅಭಿವೃದ್ಧಿಗೆ ಶ್ರಮಿಸುವ ಕೆಲಸ ಮಾಡುತ್ತೇವೆ ಎಂದರು.

ಕಳೆದ ಬೇಸಿಗೆಯಲ್ಲಿ ಬರಗಾಲ ಇದ್ದರೂ ಕೂಡ ಜಿಲ್ಲೆಗೆ ಬರದ ತೊಂದರೆ ರೈತರಿಗೆ ತಟ್ಟದಂತೆ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನೀಡುವ ಮೂಲಕ ಸಾರ್ವಜನಿಕರಿಗೆ ಒಳಿತು ಮಾಡಿದ್ದೇವೆ. ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕ ನೀಡುವ ಮೂಲಕ ಬೇಸಿಗೆಯಲ್ಲಿ ಬಂದಂತಹ ಬರಗಾಲವನ್ನು ಯಾವುದೇ ಸಮಸ್ಯೆಯಿಲ್ಲದೆ ಬಗೆ ಹರಿಸಿದ ಹೆಮ್ಮೆ ನಮ್ಮ ಸರ್ಕಾರದ್ದಾಗಿದೆ ಎಂದರು.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ ಆರ್ ಎಸ್ ನ ಕಾವೇರಿ ಮಾತೆಗೆ 3 ನೇ ಬಾರಿ ಬಾಗಿನವನ್ನು ಅರ್ಪಿಸುವ ಸುಯೋಗ ಇಂದು ಒದಗಿ ಬಂದಿದೆ ಎಂದರು.

ದೇವರ ಕೃಪೆಯಿಂದ ಇಂದು ಕೆ ಆರ್ ಎಸ್ ಅಣೆಕಟ್ಟು ತುಂಬಿರುವ ಅದ್ಭುತವಾದ ಘಳಿಗೆಯಲ್ಲಿ ಈ ನಾಡಿನ ಕಾವೇರಿ ತಾಯಿಗೆ ನಿಮ್ಮೆಲ್ಲರ ಸಮ್ಮುಖದಲ್ಲಿ ಬಾಗಿನವನ್ನು ಅರ್ಪಿಸಲಾಗಿದೆ. ಎಲ್ಲರ ಆಶೀರ್ವಾದ ನಮ್ಮ ಮೇಲಿರಲಿ ಎಂದರು.

ಕರ್ನಾಟಕ ಹಾಗೂ ತಮಿಳುನಾಡಿನ ಸಮಸ್ಯೆಯನ್ನು ಬಗೆ ಹರಿಸಲು ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ 2 ಕಮಿಟಿಯನ್ನು ಮಾಡಲಾಗಿದ್ದು, ಸಮಸ್ಯೆ ಬಗೆ ಹರಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲೂ ಸಹ ರೈತರ ಯಾವುದೇ ಸಮಸ್ಯೆಯಲ್ಲೂ ಕೂಡ ಜೊತೆ ನಿಂತು ಬಗೆಹರಿಸಲಾಗುವುದು. ದೇಶದ ಆಡಳಿತವನ್ನು ನಿರ್ಧಾರ ಮಾಡುವಂತದ್ದು ಜನತೆಯೇ ವಿನಃ ಯಾವುದೇ ಅಧಿಕಾರವಲ್ಲ ಎಂದರು.

ವಿಶ್ವ ದರ್ಜೆಯಲ್ಲಿ ಬೃಂದಾವನವನ್ನು ನಿರ್ಮಾಣ ಮಾಡಲಾಗುವುದು. ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಾಗಿದ್ದು ನೂತನವಾಗಿ ಸಕ್ಕರೆ ಕಾರ್ಖಾನೆ ಹಾಗೂ ಕೃಷಿ ವಿಶ್ವ ವಿದ್ಯಾನಿಲಯವನ್ನು ಕಟ್ಟಿಸಲಾಗುವುದು. ಎಲ್ಲಾ ವಿಚಾರದಲ್ಲೂ ನಮ್ಮ ಸರ್ಕಾರ ಬದ್ಧತೆಯನ್ನು ತೋರುತ್ತದೆ ಎಂದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago