ಮಂಡ್ಯ

ಅಸ್ಥಿ ವಿಸರ್ಜನೆಯಿಂದ ಕಾವೇರಿ ಮಲಿನ : ಸೂಕ್ತ ಕ್ರಮಕ್ಕೆ ಮನವಿ

ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ

ಶ್ರೀರಂಗಪಟ್ಟಣ:  ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ ನೀರಿಗೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲಿನಗೊಳಿಸಲಾಗುತ್ತಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಪುರಾತನ ಕಾಲದಲ್ಲಿ ವಿಸರ್ಜಿಸುತ್ತಿದ್ದ ಸ್ಥಳಗಳಲ್ಲೇ ಸ್ಥಳಾವಕಾಶ ಮಾಡಿ, ಸ್ವಚ್ಚತೆ ಕಾಪಾಡುವಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿ ನೀಡಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ನದಿ ನೀರು ಮಲಿನದ ಜೊತೆ ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ಮಲಿನಗೊಳಿಸಲಾಗುತ್ತಿದೆ. ಕಾವೇರಿ ನದಿ ತೀರದ ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳನ್ನು ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವವರಿಗೆ ಅನುಕೂಲಗಳ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜೊತೆಗೆ ಪುರಸಭೆ ವತಿಯಿಂದಲೇ ಪೂರ್ವಾಧಿ ಕಾಲದಿಂದ ನಡೆದು ಬಂದ, ಪಶ್ಚಿಮವಾಹಿನಿ ಹಾಗೂ ಕಾವೇರಿ ಸಂಗಮ ಸ್ಥಳದಲ್ಲೇ ಅಸ್ಥಿ ವಿಸರ್ಜನೆಗೆ ಜಾಗ ಕಲ್ಪಿಸಿ, ಆ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಅಲ್ಲದೆ ನಿಮ್ಮ ಸಿಬ್ಬಂದಿಗಳ ನೇಮಕ ಮಾಡಿ ನದಿಗೆ ತ್ಯಾಜ್ಯಗಳು, ಬಟ್ಟೆಗಳನ್ನು ನದಿಯಲ್ಲಿ ವಿಸರ್ಜಿಸದಂತೆ ನೋಡಿಕೊಳ್ಳಬೇಕು. ಇದರ ಜೊತೆ ನುರಿತ ಧಾರ್ಮಿಕ ಕ್ರಿಯಾ ಪೂಜೆ ನಡೆಸುವ ಪುರೋಹಿತರನ್ನು ನೇಮಕ ಮಾಡಿ, ಅವರಿಗೆ ಗುರುತಿನ ಪತ್ರ ನೀಡಿ, ಅಸ್ಥಿ ವಿಸರ್ಜನೆಗೆ ಇಂತಿಷ್ಟು ಶುಲ್ಕ ನಿಗಧಿ  ಮಾಡಿ ರಶೀದಿ ಹಾಕಿ ಪುರಸಭೆಗೆ ಆದಾಯ ಬರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಬಳಿಕ ಮುಖ್ಯಾಧಿಕಾರಿ ಎಂ.ರಾಜಣ್ಣ ಮಾತನಾಡಿ, ಕಾವೇರಿ ನದಿಗೆ ಅನುಪಯುಕ್ತ ವಸ್ತುಗಳು ಸೇರಿದಂತೆ ಅಸ್ಥಿ ವಿರ್ಜನೆ ಜೊತೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲೀನ ಕುರಿತು ಅದರ ಸಂರಕ್ಷಣೆ ವಿಷಯವಾಗಿ ಹೈಕೋರ್ಟ್‌ನಲ್ಲಿ ಕುಶಾಲ್ ಕುಮಾರ್ ಕೌಶಿಕ್ ಮತ್ತಿತರರು ರಿಟ್ ಅರ್ಜಿ ಸಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ಮಂಡ್ಯ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ತಹಸಿಲ್ದಾರ್, ಪುರಸಭೆ ಅಧ್ಯಕ್ಷರು, ಸದಸ್ಯರ ಸಭೆಯನ್ನು ಸಹ ನಡೆಸಲಾಗಿದೆ. ಈ ಸಮಸ್ಯೆ ಪರಿಹರಿಸಲು ನದಿ ಮಲಿನವನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಲು ರೂಪು ರೇಷೆಗಳ ರೂಪಿಸಿದ್ದು, ಸಾರ್ವಜನಿಕರ ಸಲಹೆ ಸೂಚನೆಗಳಿಗೂ ಒಂದು ತಿಂಗಳು ಅವಕಾಶ ನೀಡಲಾಗಿದೆ. ನಂತರ ಯಾವುದೇ ಸಮಸ್ಯೆಗಳು ಬಾರದಂತೆ ಬರುವ ಪ್ರವಾಸಿಗರು ಧಾರ್ಮಿಕ ಕಾರ್ಯ ನಡೆಸುವರಿಗೆ ಮೂಲ ಭೂತ ಸೌಕರ್ಯಗಳಿಗೆ ಒತ್ತು ನೀಡಲು ಡಿಪಿಆರ್ ಸಿದ್ಧತೆ ಮಾಡಿ ಸರ್ಕಾರದ ಗಮನಕ್ಕೆ ತಂದ ನಂತರ ಕಾರ್ಯರೂಪಗೊಳಿಸಲಾಗುತ್ತದೆ ಎಂದರು.

ಈ ವೇಳೆ ಲಕ್ಷ್ಮಿನಾರಾಯಣ, ರಾಘು, ಚೇತನ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

19 mins ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

52 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago