ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…