ಮಂಡ್ಯ

ತಮಿಳುನಾಡಿಗೆ ಕಾವೇರಿ : ಮಂಡ್ಯದಲ್ಲಿ ತಲೆಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸಿದ ಸೇನೆಯ ಕಾರ್ಯಕರ್ತರು ಕಾವೇರಿ ಹೋರಾಟಕ್ಕೆ ಇಳಿಯದ ಜಿಲ್ಲೆಯ ಶಾಸಕರು ಮತ್ತು ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು ಕಾವೇರಿ ನೀರು ಉಳಿವಿಗಾಗಿ ಬೀದಿಗಿಳಿದು ಹೋರಾಟ ಮಾಡಬೇಕು, ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ನೆರೆ ರಾಜ್ಯಕ್ಕೆ 18 ಟಿಎಂಸಿ ನೀರು ಹರಿದು ಹೋಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು, ರೈತರ ಹಿತ ಕಡೆಗಣಿಸಿ ನೀರು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಾಂತಪ್ಪ, ಶಿವಾಲಿ, ನಂದೀಶ್, ಮಂಜುನಾಥ್ ಬೆಟ್ಟಳ್ಳಿ, ಅರಕೆರೆ ರಘು, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಇತರರು ಭಾಗವಹಿಸಿದ್ದರು.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago