ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಬಳಿ ಕಾವೇರಿ ನದಿಗೆ ಇಳಿದು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಇತ್ತ ಕಾವೇರಿಗಾಗಿ ಎಚ್.ಡಿ.ದೇವೇಗೌಡರು ಪೂಜೆ ಮಾಡುತ್ತಿದ್ದಾರೆ ಎಂದು ಮಂಡ್ಯದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಉಳಿಸುವುದಿಲ್ಲ. ನೀನು ಹೋರಾಟಕ್ಕೆ ಹೋಗಿ ಎಂದು ನನ್ನನ್ನು ಕಳುಹಿಸಿದ್ದಾರೆ. ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುತ್ತೇವೆ ಅಂತೀರಾ?. ನಿಮಗೆ ಹಾಗೇ ಹೇಳುವ ಅಧಿಕಾರ ಕೊಟ್ಟವರು ಯಾರು?, ಸಂಕಷ್ಟದ ಬಗ್ಗೆ ಮೊದಲೇ ಪ್ರಾಧಿಕಾರಕ್ಕೆ ಯಾಕೆ ಮನವಿ ಮಾಡಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್ನವರು 5 ಗ್ಯಾರಂಟಿ ಶಿವ ಅಂತೀರಾ, ಲಿಕ್ಕರ್ಗೆ 30 ರೂಪಾಯಿ ಜಾಸ್ತಿ ಮಾಡಿದ್ದೀರಲ್ಲ ಶಿವ ಎಂದು ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ. ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ನೀರು ನಿಲ್ಲಿಸೋಕೆ ನಿಮಗೆ ಧೈರ್ಯವಿಲ್ವಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ ಜಿಟಿಡಿ, ಜೈಲಿಗೆ ಹೋದರೂ ಪರವಾಗಿಲ್ಲ ನೀರು ನಿಲ್ಲಿಸಿ, ರೈತರ ಪರ ನಿಲ್ಲಿ ಎಂದಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…