ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆ ಹಾಗೂ ಕಾನೂನು ಚೌಕಟ್ಟು ವ್ಯವಸ್ಥೆಯಲ್ಲಿ ಕುಮಾರಸ್ವಾಮಿ ಅವರು ಈ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.
ಮಂಡ್ಯ ಜಿಲ್ಲೆಯ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಕುಮಾರಸ್ವಾಮಿ ನಡೆದುಕೊಳ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು. ರೈತರ ಜಮೀನಿನಲ್ಲಿ ನೀರಿಲ್ಲದೇ ತೆಕ್ಕಲು ಬೆಳೆದು ನಿಂತಿದೆ. ಯಾವ ಜವಾಬ್ದಾರಿಯನ್ನು ಯಾರು ನಿರ್ವಹಿಸಬೇಕು ಎಂಬುದನ್ನು ಅಂಬೇಡ್ಕರ್ ಅವರೇ ಸಂವಿಧಾನದಲ್ಲಿ ಬರೆದಿಟ್ಟಿದ್ದಾರೆ. ನಾವು ರೈತರ ಪರ ಇದ್ದೇವೆ. ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಕೈ ನಾಯಕರಿಗೆ ತಿರುಗೇಟು ನೀಡಿದರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…