Mysore
35
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಬಿಜೆಪಿ ಮುಖಂಡ ಕೆ.ಸಿ ನಾರಾಯಣ ಗೌಡ ಕಾಂಗ್ರೆಸ್‌ ಸೇರಲಿದ್ದಾರೆ: ಚೆಲುವರಾಯಸ್ವಾಮಿ

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು ಸ್ನೇಹಿತರಾಗಿದ್ದು, ನಿರಂತರವಾಗಿ ಅವರು ನಮ್ಮ ಸಂಪರ್ಕದಲ್ಲಿದ್ದರು. ಈ ಅವರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಕೆ.ಆರ್‌ ಪೇಟೆಯ ಹಲವು ಮುಖಂಡರು, ಕಾರ್ಯಕರ್ತರನ್ನು ಒಳಗೊಂಡಂತೆ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದರು.

ನಾರಾಯಣ ಗೌಡ ಅವರ ಸೇರ್ಪಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

Tags:
error: Content is protected !!