ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೊನ್ನೆ ಮಂಡ್ಯ ತಾಲ್ಲೂಕಿನ ಗ್ರಾಮವೊಂದರಲ್ಲಿ ಹೋಗುವಾಗ ಅಲ್ಲಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ನನ್ನನ್ನು ಶಾಲೆಗೆ ಬರುವಂತೆ ಆಹ್ವಾನಿಸಿದರು. ಅದು ಮಂಡ್ಯ ಉತ್ತರ ವಲಯಕ್ಕೆ ಸೇರಿದ ಶಾಲೆ. ಅಲ್ಲಿನ ತರಗತಿ ಕೊಠಡಿಗೆ ಹೋಗಿ ಮಕ್ಕಳೊಂದಿಗೆ ಮಾತನಾಡಿದೆ. ಅಂತೆಯೇ ಕರ್ನಾಟಕದ ರಾಜ್ಯಪಾಲರು ಯಾರೆಂದು ಪ್ರಶ್ನಿಸಿದರೆ ಒಬ್ಬ ವಿದ್ಯಾರ್ಥಿಯೂ ಉತ್ತರ ಕೊಡಲಿಲ್ಲ. ಇದು ನನಗೆ ನಿಜಕ್ಕೂ ಆಶ್ಚರ್ಯ ತರಿಸಿತು. ರಾಜ್ಯಪಾಲರ ಹೆಸರೇ ಗೊತ್ತಿಲ್ಲ ಎಂದರೆ ಶಿಕ್ಷಕರು ಮಕ್ಕಳಿಗೆ ಏನು ಕಲಿಸಿದ್ದಾರೆ ಎಂದು ಬಿಇಓಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಡಿವೈಎಸ್ಪಿ ರಮೇಶ್, ತಾಲ್ಲೂಕು ಪಂಚಾಯಿತಿ ಇಓ ವೀಣಾ ಸೇರಿದಂತೆ ಹಲವುರು ಭಾಗಿಯಾಗಿದ್ದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…