ಮಂಡ್ಯ

ಮಕ್ಕಳಿಗೆ ರಾಜ್ಯಪಾಲರ ಹೆಸರೇ ಗೊತ್ತಿಲ್ಲ: ಶಾಸಕ ರವಿಕುಮಾರ್‌ ಗಣಿಗ ಬೇಸರ

ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್‌ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೊನ್ನೆ ಮಂಡ್ಯ ತಾಲ್ಲೂಕಿನ ಗ್ರಾಮವೊಂದರಲ್ಲಿ ಹೋಗುವಾಗ ಅಲ್ಲಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ನನ್ನನ್ನು ಶಾಲೆಗೆ ಬರುವಂತೆ ಆಹ್ವಾನಿಸಿದರು. ಅದು ಮಂಡ್ಯ ಉತ್ತರ ವಲಯಕ್ಕೆ ಸೇರಿದ ಶಾಲೆ. ಅಲ್ಲಿನ ತರಗತಿ ಕೊಠಡಿಗೆ ಹೋಗಿ ಮಕ್ಕಳೊಂದಿಗೆ ಮಾತನಾಡಿದೆ. ಅಂತೆಯೇ ಕರ್ನಾಟಕದ ರಾಜ್ಯಪಾಲರು ಯಾರೆಂದು ಪ್ರಶ್ನಿಸಿದರೆ ಒಬ್ಬ ವಿದ್ಯಾರ್ಥಿಯೂ ಉತ್ತರ ಕೊಡಲಿಲ್ಲ. ಇದು ನನಗೆ ನಿಜಕ್ಕೂ ಆಶ್ಚರ್ಯ ತರಿಸಿತು. ರಾಜ್ಯಪಾಲರ ಹೆಸರೇ ಗೊತ್ತಿಲ್ಲ ಎಂದರೆ ಶಿಕ್ಷಕರು ಮಕ್ಕಳಿಗೆ ಏನು ಕಲಿಸಿದ್ದಾರೆ ಎಂದು ಬಿಇಓಗಳನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ಬಾಬು, ತಹಶೀಲ್ದಾರ್‌ ಡಾ.ಶಿವಕುಮಾರ್‌ ಬಿರಾದಾರ್‌, ಡಿವೈಎಸ್ಪಿ ರಮೇಶ್‌, ತಾಲ್ಲೂಕು ಪಂಚಾಯಿತಿ ಇಓ ವೀಣಾ ಸೇರಿದಂತೆ ಹಲವುರು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

9 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

51 mins ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

1 hour ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

2 hours ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

2 hours ago