ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೊನ್ನೆ ಮಂಡ್ಯ ತಾಲ್ಲೂಕಿನ ಗ್ರಾಮವೊಂದರಲ್ಲಿ ಹೋಗುವಾಗ ಅಲ್ಲಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ನನ್ನನ್ನು ಶಾಲೆಗೆ ಬರುವಂತೆ ಆಹ್ವಾನಿಸಿದರು. ಅದು ಮಂಡ್ಯ ಉತ್ತರ ವಲಯಕ್ಕೆ ಸೇರಿದ ಶಾಲೆ. ಅಲ್ಲಿನ ತರಗತಿ ಕೊಠಡಿಗೆ ಹೋಗಿ ಮಕ್ಕಳೊಂದಿಗೆ ಮಾತನಾಡಿದೆ. ಅಂತೆಯೇ ಕರ್ನಾಟಕದ ರಾಜ್ಯಪಾಲರು ಯಾರೆಂದು ಪ್ರಶ್ನಿಸಿದರೆ ಒಬ್ಬ ವಿದ್ಯಾರ್ಥಿಯೂ ಉತ್ತರ ಕೊಡಲಿಲ್ಲ. ಇದು ನನಗೆ ನಿಜಕ್ಕೂ ಆಶ್ಚರ್ಯ ತರಿಸಿತು. ರಾಜ್ಯಪಾಲರ ಹೆಸರೇ ಗೊತ್ತಿಲ್ಲ ಎಂದರೆ ಶಿಕ್ಷಕರು ಮಕ್ಕಳಿಗೆ ಏನು ಕಲಿಸಿದ್ದಾರೆ ಎಂದು ಬಿಇಓಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಡಿವೈಎಸ್ಪಿ ರಮೇಶ್, ತಾಲ್ಲೂಕು ಪಂಚಾಯಿತಿ ಇಓ ವೀಣಾ ಸೇರಿದಂತೆ ಹಲವುರು ಭಾಗಿಯಾಗಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…