ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.
ಅವರು ಇಂದು ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಮತ್ತು ಮಾನವ ಸರಪಳಿ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮೇ 16 ರಂದು ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಯನ್ನು ಆಚರಣೆ ಮಾಡಲಾಗುತ್ತದೆ. ಡೆಂಗ್ಯೂ ನಿಯಂತ್ರಣದ ಜಾಗೃತಿ ಜಾಥಾ ಕಾರ್ಯಕ್ರಮ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಹ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ರೋಗ ಬರುವುದಕ್ಕೂ ಮುಂಚಿತವಾಗಿ ನಾವುಗಳು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ, ಹೀಗಾಗಿ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಿ ಎಂದರು.
ಜಿಲ್ಲಾ ಆರೋಗ್ಯಧಿಕಾರಿ ಡಾ ಕೆ ಮೋಹನ್ ಮಾತನಾಡಿ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಈ ಬಾರಿ ಸಮುದಾಯದೊಂದಿಗೆ ಸೇರಿ ಡೆಂಗ್ಯೂ ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವಂತಹದ್ದು ಒಬ್ಬರಿಂದ ಮತ್ತೊಬ್ಬರಿಗೆ ಬರುವಂತಹ ಖಾಯಿಲೆ ಇದು ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಎಂದರು.
ತೀವ್ರ ಜ್ವರ, ಕಣ್ಣು ಹಿಂಭಾಗ ನೋವು, ತೀರ ಮೈ-ಕೈ ನೋವು ಡೆಂಗ್ಯೂ ರೋಗದ ಲಕ್ಷಣಗಳು. ಈ ರೋಗ ಬರದಂತೆ ತಡೆದುಕೊಳ್ಳುವುದೇ ಮೂಲ ಉದ್ದೇಶವಾಗಿರುತ್ತದೆ, ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳುವುದು, ಮನೆ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಹಾಗೂ ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.
ನಗರದ ಸಂಜಯ್ ವೃತ್ತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಡೆಂಗ್ಯೂ ನಿಯಂತ್ರಣದ ಘೋಷವಾಕ್ಯ ಕೂಗುತ್ತಾ ಸಂಜಯ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಡೆಂಗ್ಯೂ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತರಾಜ, ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ ಕೆ ಸೋಮಶೇಖರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…