ಮಂಡ್ಯ

ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ: ಎನ್. ಚೆಲುವರಾಯಸ್ವಾಮಿ

ಮಂಡ್ಯ: ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು(ಜೂ.30) ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆದ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಪ್ರತಿ ವರ್ಷವೂ ಸರ್ಕಾರದಿಂದ ವಿವಿಧ ಜಯಂತಿಯನ್ನು ಆಚರಿಸುತ್ತಿದ್ದೂ, ನಮ್ಮ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ವಿವಿಧ ಮಹನೀಯರು ನೀಡಿದ ಕೊಡುಗೆಗೆ ಗೌರವ ಸಲ್ಲಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ಜಯಂತಿ ಆಚರಣೆಯ ಉದ್ದೇಶವಾಗಿದೆ ಎಂದರು.

ಬೆಂಗಳೂರು ನಗರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದೂ, ಇದಕ್ಕೆ ಕಾರಣ ಕೆಂಪೇಗೌಡರವರ ದೂರದೃಷ್ಟಿ ಹಾಗೂ ರೂಪಿಸಿದ ಯೋಜನೆಗಳು, ನಾಡಪ್ರಭು ಕೆಂಪೇಗೌಡರು ತಮ್ಮ ಆಳ್ವಿಕೆಯ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯನ್ನು ನೋಡಿ ಪ್ರಭಾವಿತರಾಗಿ, ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಬೇಕು ಎಂದು ಪಣತೊಟ್ಟು ಬೆಂಗಳೂರು ನಗರವನ್ನು ನಿರ್ಮಿಸಿದರು. ಅವರ ದೃಷ್ಟಿಕೋನ ಎಲ್ಲಾ ವರ್ಗದ ಜನರಿಗೆ ಒಳಿತು ಹಾಗೂ ಅನುಕೂಲವಾಕರವಾಗಿತ್ತು. ಬೆಂಗಳೂರಿನಲ್ಲಿ ಸಮೃದ್ಧಿಯಾಗಿ ಕೆರೆ ಕಟ್ಟೆಗಳ ನಿರ್ಮಾಣದ ಜೊತೆಗೆ ವ್ಯಾಪಾರಕ್ಕೆ ಉತ್ತಮ ಅವಕಾಶ ಕಲ್ಪಿಸಿದ್ದಾರೆ. ನೂರಾರು ವರ್ಷಗಳ ಕಾಲ ಜನರಿಗೆ ಉಪಯೋಗವಾಗುವಂತೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಪ್ರತಿಯೊಬ್ಬರಲ್ಲೂ ನಮ್ಮ ದೇಶ, ನಮ್ಮ ನಾಡು ಎಂಬ ಮನೋಭಾವನೆ ಬೆಳೆಯಬೇಕು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಇರಬೇಕು. ಸಮಾಜಮುಖಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ ಅವರೊಂದಿಗೆ ಕೈ ಜೋಡಿಸಿ ಎಂದರು.


ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜಸೇವೆ/ಸಂಘಟನೆಯ ವಿಭಾಗ- ಜ್ಯೋತಿ ನಾಗಣ್ಣಗೌಡ, ರೈತ ಚಳುವಳಿ ನಾಯಕರಾದ- ಎ.ಎಮ್. ಕೆಂಪುಗೌಡ, ಸಮಾಜ ಸೇವೆ/ಯುವ ಸಂಘಟನೆಯ- ತಗ್ಗಳ್ಳಿ ವೆಂಕಟೇಶ್, ರಕ್ತದಾನ ಶಿಬಿರ ಸಂಘಟನೆ- ಎನ್ ಕೆ ಯುವ ಬ್ರಿಗೇಡ್, ಕ್ರೀಡಾ ಕ್ಷೇತ್ರ- ಅರವಿಂದ್ ಎ ಅವರಿಗೆ ಸನ್ಮಾನ ಮಾಡಲಾಯಿತು. ತದನಂತರ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ-ಮದ್ದೂರು ತಾಲೂಕು ಪೂರ್ಣ ಪ್ರಜ್ಞಾ ಕಾನ್ವೆಂಟ್ ಶಾಲೆಯ ಲಿಖಿತಾರಾಜು, ದ್ವಿತೀಯ ಬಹುಮಾನ-ಪಾಂಡವಪುರ ತಾಲೂಕು ಎಲ್ ಕೆ ಆರ್ ಸಿಬಿಎಸ್ಸಿ ಶಾಲೆಯ ಪ್ರಜ್ಞಾ, ತೃತೀಯ ಬಹುಮಾನ- ಮಂಡ್ಯ ಉತ್ತರ ವಲಯದ ದೊಡ್ಡಗರುಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಆಶಾ ಅವರಿಗೆ ಬಹುಮಾನ ವಿತರಿಸಲಾಯಿತು.

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಬಹುಮಾನ- ಶ್ರೀರಂಗಪಟ್ಟಣ ತಾಲೂಕು ಅರಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೀಪಿಕಾ ಜಿ.ಕೆ, ದ್ವಿತೀಯ ಬಹುಮಾನ- ಮದ್ದೂರು ತಾಲೂಕು ಶಿವಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಶನ್ ಸಿ.ಎನ್ ಅವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಉದಯಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

3 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

7 mins ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

12 mins ago

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…

15 mins ago

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

20 mins ago