ಮಂಡ್ಯ: ಕೆ.ಆರ್.ಸಾಗರ ಬೃಂದಾವನಕ್ಕೆ ಬಂದಿದ್ದ ಕೇರಳ ಮೂಲದ ಬಸ್ಸೊಂದು ಹಿಂಬದಿ ಚಲಿಸಿದ ಪರಿಣಾಮ ಕೇರಳ ಮೂಲದ ಮಹಿಳೆ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಬೃಂದಾವನ ಬಸ್ ಪಾರ್ಕಿಂಗ್ನಲ್ಲಿ ನಡೆದಿದೆ.
ಕೇರಳದ ಕೊಲ್ಲಂ ಗ್ರಾಮದ ಮಹಿಳೆಯರಿಬ್ಬರು ಬೃಂದಾವನ ವೀಕ್ಷಣೆ ಮಾಡಿಬಂದು ಊಟ ಮಾಡುತ್ತಿದ್ದರು. ಈ ವೇಳೆ ಅಲ್ಲೇ ನಿಂತಿದ್ದ ಕೇರಳ ಬಸ್ಸೊಂದು ಏಕಾಏಕಿ ಹಿಂಬದಿ ಚಲಿಸಿದೆ.
ಇದನ್ನು ಓದಿ: ಟಿಪ್ಪರ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು
ಈ ವೇಳೆ ಕಟ್ಟೆಯೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಸ್ ಗುದ್ದಿದೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಸಲ್ಯ ಎಂಬ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ನಾರಾಯಣಿ ಎಂಬುವವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಕೆ.ಆರ್.ಸಾಗರ ಪೊಲೀಸ್ ಠಾಣೆ ಪಿ.ಎಸ್.ಐ ರಮೇಶ್ ಕರಕಿಕಟ್ಟೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಸಿಗರಿಂದ ಮಾಹಿತಿ ಪಡೆದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…