ಮಂಡ್ಯ

ನಾಗಮಂಗಲ ಗಲಭೆ: ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸದಸ್ಯರು ಭಾಗಿ ಶಂಕೆ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆದ ಕೋಮು ಗಲಭೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯನ್ನು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಪೂರ್ವನಿಯೋಜಿತ ಕೃತ್ಯ ಎಂದು ಆರೋಪಿಸುತ್ತಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ 74 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಮಧ್ಯೆ ಗಲಾಟೆ ಹಿಂದೆ ಕೇರಳ ಮೂಲದವರ ಕೈವಾಡವಿದೆ ಎಂಬ ಅನುಮಾನ ಮೂಡಿದ್ದು, ಎಫ್‌ಐಆರ್‌ ದಾಖಲಿಸಿರುವ ಪೈಕಿಯಲ್ಲಿ ಇಬ್ಬರೂ ಕೇರಳ ಮೂಲದ ಹೆಸರು ಉಲ್ಲೇಖವಾಗಿದೆ. ಅದರಲ್ಲಿ ಎ44 ಯೂಸುಫ್‌ ಮತ್ತು ಎ61 ನಾಸೀರ್‌ ಎಂಬುವವರು ಕೇರಳ ಮೂಲದ ಮಲಪ್ಪುರಂ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇದೆಲ್ಲದರ ನಡುವೆ ಈ ಇಬ್ಬರು ಆರೋಪಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯರು ಎಂಬ ಶಂಕೆ ವ್ಯಕ್ತವಾಗಿದೆ.

ಕೆಲವು ದಿನಗಳಿಂದ ನಾಗಮಂಗಲದಲ್ಲಿ ವಾಸವಿದ್ದ ನಾಸೀರ್‌ ಹಾಗೂ ಯೂಸುಫ್‌, ಮೊದಲೇ ಸಂಚು ರೂಪಿಸಿ ಗಲಾಟೆಗೆ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಗಣೇಶ ವಿಸರ್ಜನೆಯನ್ನೇ ಅಸ್ತ್ರ ಮಾಡಿಕೊಂಡ ಅವರು, ಆ ದಿನ ಗಲಭೆ ಎಬ್ಬಿಸಿದ್ದಾರೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು, ಘಟನೆ ನಡೆಯುವ ಸಂದರ್ಭದಲ್ಲಿ ಕೇರಳದವರು ಬಂದು ಹೋಗಿಲ್ಲ. ಕೇರಳದವರೇ ನಾಗಮಂಗಲ ಬೇಕರಿಯಲ್ಲಿ ಕೆಲಸ ನಿವಹಿಸುತ್ತಿದ್ದಾರೆ. ಹಾಗಾಗಿ ಅವರನ್ನು ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೆಸ್ಟ್‌ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆಯಾಗದೇ ಪಿಎಫ್‌ಐ ಸಂಘಟನೆಯವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗಲ್ಲ. ಈ ಬಗ್ಗೆ ಯಾವುದೇ ಊಹಾಪೋಹಗಳು ಬೇಡ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

1 hour ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

6 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

6 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

6 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

6 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

9 hours ago