Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!