ಮಂಡ್ಯ

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

andolana

Recent Posts

ಮಾರ್ಚ್.‌11ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು…

5 mins ago

ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ರಾಷ್ಟ್ರವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ರಾಷ್ಟ್ರ ವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮಿರ್‍ನಲ್ಲಿ…

11 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ನಾನಾ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ

ಮೈಸೂರು: ಮಾರ್ಚ್.‌3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ…

34 mins ago

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

1 hour ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

3 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

3 hours ago